ಕಮಲ್ ಸಿನಿಮಾ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ!

ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಮಾಡಿದರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ಚುತ್ತೇವೆ ಎಂದು  ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ.

ಆಗಾಗ ಕನ್ನಡಿಗರ ವಿಚಾರದಲ್ಲಿ ಮಾತು ಜಾಸ್ತಿ ಆಗಿದೆ. ಹೊರಗಿಂದ ಬಂದವರು ಕರ್ನಾಟಕ, ಕನ್ನಡದವರ ವಿರುದ್ಧ ಮಾತು ಆಡುತ್ತಿದ್ದಾರೆ. ತಮಿಳುನಾಡು ಆಗಾಗ ಕಾವೇರಿ ವಿಚಾರದಲ್ಲಿ ಸಂಘರ್ಷ ನಡೆಸುತ್ತಿತ್ತು. ಸಂಘರ್ಷಕ್ಕೆ ನಾಂದಿ ಹಾಡುವ ನಿಟ್ಟಿನಲ್ಲಿ ದ್ರಾವಿಡ ರಾಜ್ಯದ ಪ್ರಮುಖ ಸಾಹಿತ್ಯ ಜೊತೆ ಮಾತನಾಡಿದ್ದೆ. ಆದರೆ ಇದೇ ಸಂದರ್ಭದಲ್ಲಿ ಕಮಲ್ ಹಾಸನ್ ಈ ರೀತಿ ಹೇಳಿದ್ದಾರೆ. ನಟನ ಬಗ್ಗೆ ಅಭಿಮಾನ ಇತ್ತು. ಆದರೆ ಮೊನ್ನೆ ಯಾವ ಆಧಾರದಲ್ಲಿ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಏಕಾಏಕಿ ತಮಿಳುಗರನ್ನ ಓಲೈಸುವ ನಿಟ್ಟಿನಲ್ಲಿ ದುರಹಂಕಾರ, ದುರಾಭಿಮಾನದ ಹೇಳಿಕೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಮಿಳಿನ ಬಗ್ಗೆ ಅವರು ಏನು ಬೇಕಾದರೂ ಹೇಳಲಿ. ಇನ್ನೊಂದು ಭಾಷೆ ಬಗ್ಗೆ ಮಾತನಾಡುವಾಗ ಕನಿಷ್ಠ ಅರಿವು ಇರಬೇಕಿತ್ತು. ಅದೇ ಸಂದರ್ಭದಲ್ಲಿ ಕನ್ನಡಿಗರನ್ನ ಒಗ್ಗೂಡಿಸುವ ನಿಟ್ಟಿನಲ್ಲಿ ಹೋರಾಟ ಮಾಡಿದವರ ಸುಪುತ್ರ ಶಿವರಾಜ್ ಕುಮಾರ್ ಇದ್ದರು. ಅವರು ಅಲ್ಲಿಯೇ ಹೇಳಬಹುದಾಗಿತ್ತು. ಕನ್ನಡಕ್ಕೆ ತನ್ನದೇ ಸ್ವಂತಿಕೆ ಇದೆ ಅಂತ ಹೇಳಬಹುದಾಗಿತ್ತು. ವಿಶ್ವದ ಲಿಪಿ ರಾಣಿ ಅಂತ ಕರೆದಿರೋದು ಕನ್ನಡ ಅಂತ ಹೇಳಬಹುದಾಗಿತ್ತು. ಆ ಸಂದರ್ಭದಲ್ಲಿ ಅವರಿಗೆ ಮಾಹಿತಿ ಇಲ್ಲದೆ ಇದ್ದಿರಬಹುದು ಎಂದು ಎಂದು ಹೇಳಿದ್ದಾರೆ.

ಆದರೆ  ಶಿವರಾಜ್ ಕುಮಾರ್ ಇವತ್ತಿಗೂ ಕಮಲ್ ಹಾಸನ್‌ರನ್ನ ವಹಿಸಿಕೊಳ್ಳುತ್ತಿರೋದನ್ನ ಸಹಿಕೊಳ್ಳೋಕೆ ಆಗಲ್ಲ. ಶಿವರಾಜ್ ಕುಮಾರ್ ಗೆ ಏಳೂವರೆ ಕೋಟಿ ಕನ್ನಡಿಗರ ಭಾವನೆ ದೊಡ್ಡದು ಅನ್ನಿಸಲಿಲ್ಲವಾ? ಅಥವಾ ಇದನ್ನ ನೇರವಾಗಿ ಹೇಳುವ ಧೈರ್ಯ ಇಲ್ಲವಾ? ಎಂದು ಶಿವರಾಜ್‌ಕುಮಾರ್ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!