ಕಮಲ್ ಶ್ರೀದೇವಿ

‘ಕಮಲ್ ಶ್ರೀದೇವಿ’ ಚಿತ್ರಕ್ಕೆ ಕುಂಬಳಕಾಯಿ

ನಾಯಕ ನಟ ಸಚಿನ್ ಚಲುವರಾಯ ಸ್ವಾಮಿ ಹಾಗೂ ಅವ್ರ ಶ್ರೀಮತಿ ಆಕಾಂಕ್ಷ ಪಟಮಕ್ಕಿ ಸಹ ನಿರ್ಮಾಪಕರಾದ ರಾಜವರ್ಧನ್ ನಿರ್ದೇಶಕರಾದ ಸುನೀಲ್ ಹಾಗೂ ಚಿತ್ರತಂಡ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಮಲ್ ಶ್ರೀದೇವಿಯ ಇಲ್ಲಿವರೆಗಿನ ಪಯಣ ಹಾಗೂ ಬಿಡುಗಡೆ ತಯಾರಿ ಕುರಿತು ವಿಶೇಷವಾಗಿ ಮಾತಾಡಿದ್ದಾರೆ.

ಕಮಲ್ ಶ್ರೀದೇವಿ ಎನ್ ಚಲುವರಾಯ ಸ್ವಾಮಿ ಅರ್ಪಿಸುವ ಸ್ವರ್ಣಾಂಬಿಕ ಪಿಚ್ಚರ್ಸ್ ಬ್ಯಾನರ್ ನಡಿಯಲ್ಲಿ ಬಿ.ಕೆ ಧನಲಕ್ಷ್ಮೀ ನಿರ್ಮಾಣದ Barnswallow companyಯ ರಾಜವರ್ಧನ್ ಸಹ ನಿರ್ಮಾಣದ ಸಚಿನ್ ಚಲುವರಾಯ ಸ್ವಾಮಿ ಅಭಿನಯದ ಚಿತ್ರ.

ಕಮಲ್ ಶ್ರೀದೇವಿ

ಕಿಶೋರ್,ರಮೇಶ್ ಇಂದಿರಾ, ಸಂಗೀತಾ ಭಟ್ ಸೇರಿ ಪ್ರತಿಭಾವಂತ ತಾರಾಬಳಗವಿರೋ ಈ ಚಿತ್ರವನ್ನ ವಿ.ಎ ಸುನೀಲ್ ಕುಮಾರ್ ನಿರ್ದೇಶಿಸಿದ್ದು, ಈ ಚಿತ್ರದ ಸಂಪೂರ್ಣ ಕ್ರಿಯೇಟಿವ್ ಜವಾಬ್ದಾರಿಯನ್ನ ಸಹ ನಿರ್ಮಾಪಕ ರಾಜವರ್ಧನ್ ಹೊತ್ತಿಕೊಂಡಿದ್ದಾರೆ.

ಈಗಾಗ್ಲೇ ಟೈಟಲ್ ಜತೆ ಕ್ರಿಯೇಟೀವ್ ಕಾನ್ಸೆಪ್ಟ್ ಪೋಸ್ಟರ್ ರಿಲೀಸ್ ಮಾಡಿ ಸುದ್ದಿಯಾಗಿದ್ದ ಚಿತ್ರತಂಡ ಇದೀಗ ಚಿತ್ರೀಕರಣ ಮುಗಿಸಿ ನಾವು ರಿಲೀಸ್ಗೆ ರೆಡಿ ಅಂತಿದೆ. ಅದ್ರಂತೆ ಇತ್ತೀಚೆಗೆ ಶ್ರೀ ಬಂಡೆ ಮಹಕಾಳಿಯಮ್ಮನ ದೇವಸ್ಥಾನದಲ್ಲಿ ಚಿತ್ರೀಕರಣ ಯಶಸ್ವಿಯಾಗಿದೆ. ಇಲ್ಲಿಂದ ಪ್ರಚಾರ ಕಾರ್ಯ ಆರಂಭಿಸ್ತಿದ್ದೀವಿ ಅಂತ ಪೂಜೆ ಸಲ್ಲಿಸಿದ್ರು. ಜೊತೆಗೆ ಮಾತನಾಡಿದ ಚಿತ್ರತಂಡ ಎಲ್ಲವೂ ನಾವಂದುಕೊಂಡಂತೆ ಆಗಿದೆ.. ಆಗಸ್ಟ್ ಸೆಪ್ಟೆಂಬರ್ ವೇಳೆಗೆ ಪ್ರೇಕ್ಷಕರೆದುರಿಗೆ ಬರಲಿದ್ದೇವೆ.. ಇಲ್ಲಿಂದ ಒಂದೊಂದಾಗಿ ಸಿನಿಮಾದ ವಿಶೇಷತೆಗಳನ್ನ ಮಧ್ಯಮದೊಂದಿಗೆ ಹಂಚಿಕೊಂಡು ಬರಲಿದ್ದೇವೆ ಎಂದಿದ್ದಾರೆ.

ಕಮಲ್ ಶ್ರೀದೇವಿ

Be the first to comment

Leave a Reply

Your email address will not be published. Required fields are marked *

Translate »
error: Content is protected !!