‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರಕ್ಕೆ ಬ್ಯಾಂಕಾಕ್‍ನಲ್ಲಿ ಮುಹೂರ್ತ

ಬಿಲ್ವ ಎಂಟರ್‍ಟೈನ್‍ಮೆಂಟ್ ಲಾಂಛನದಲ್ಲಿ ನವೀನ್ ಕುಮಾರ್ ಜಿ.ಆರ್ ಅವರು ನಿರ್ಮಿಸುತ್ತಿರುವ `ಕಾಣೆಯಾದವರ ಬಗ್ಗೆ ಪ್ರಕಟಣೆ` ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬ್ಯಾಂಕಾಕ್‍ನಲ್ಲಿ ನಡೆಯಿತು. 16 ದಿನಗಳ ಕಾಲ ಬ್ಯಾಂಕಾಕ್‍ನಲ್ಲೇ ಚಿತ್ರೀಕರಣ ನಡೆಯಲಿದ್ದು, 35ಜನರ ತಂಡ ಅಲ್ಲಿಗೆ ಪ್ರಯಾಣ ಬೆಳೆಸಿದೆ. ಮಾತಿನ ಭಾಗ ಹಾಗೂ ಒಂದು ಹಾಡಿನ ಚಿತ್ರೀಕರಣ ಬ್ಯಾಂಕಾಕ್‍ನಲ್ಲಿ ನಡೆಯಲಿದೆ.

ಈ ಹಿಂದೆ ‘ಶಕ್ತಿ’, ‘ದಿಲ್‍ವಾಲ’, ‘ಕೃಷ್ಣ ರುಕ್ಕು’, ‘ರ್ಯಾಂಬೋ 2’ ‘ಕಿರಾತಕ 2′, ದಾರಿ ತಪ್ಪಿದ ಮಗ’ ಸೇರಿದಂತೆ ಆರು ಚಿತ್ರಗಳ ನಿರ್ದೇಶಕರಾಗಿರುವ ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರ ನಿರ್ದೇಶನದ ಏಳನೇ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಅನಿಲ್ ಕುಮಾರ್ ಅವರೆ ಬರೆದಿದ್ದಾರೆ.

65ವರ್ಷ ಮೇಲ್ಪಟವರ (ಹಿರಿಯ ನಾಗರಿಕರ) ಬಗ್ಗೆಗಿನ ಕಥಾ ಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರವಿಶಂಕರ್, ರಂಗಾಯಣ ರಘು, ತಬಲನಾಣಿ, ಚಿಕ್ಕಣ್ಣ ಅಭಿನಯಿಸುತ್ತಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಶಿವಕುಮಾರ್ ಬಿ.ಕೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

This Article Has 2 Comments
  1. Pingback: description

  2. Pingback: DevOps Solutions

Leave a Reply

Your email address will not be published. Required fields are marked *

Translate »
error: Content is protected !!