‘ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಕಮಲ್ ಹಾಸನ್ ವಿರುದ್ಧ ಟೀಕೆಗಳ ನಡುವೆ ಕನ್ನಡತಿ ಸೀರಿಯಲ್ ಖ್ಯಾತಿಯ ರಂಜನಿ ರಾಘವನ್ ಕನ್ನಡ ಪುಸ್ತಕ ಕೊಟ್ಟಿದ್ದಾರೆ.
ರಂಜನಿ ರಾಘವನ್ ಕತೆ ಡಬ್ಬಿ’ ಎಂಬ ಕಥಾಸಂಕಲನದ ಜೊತೆಗೆ ‘ಸ್ವೈಪ್ ರೈಟ್’ ಪುಸ್ತಕ ಬರೆದಿದ್ದಾರೆ. ಈ ಪುಸ್ತಕವನ್ನು ಕಮಲ್ ಹಾಸನ್ ಗೆ ಕೊಟ್ಟಿದ್ದಾರೆ. ರಂಜನಿ ರಾಘವನ್ ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿರುವ ಫೋಟೋ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
‘ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಕಮಲ್ ಹಾಸನ್ ಹಚ್ಚಿದ ಕಿಡಿ ಈಗ ದೊಡ್ಡ ಮಟ್ಟದ ಚರ್ಚೆ ಹುಟ್ಟು ಹಾಕಿದೆ. ಕಮಲ್ ಕ್ಷಮೆ ಕೇಳಬೇಕು ಎಂದು ಕನ್ನಡಿಗರು ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಅವರು ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದು ಹಿಡಿದಿದಿದ್ದಾರೆ.
ಕಮಲ್ ಹೇಳಿಕೆ ಬಗ್ಗೆ ಕನ್ನಡ ಚಿತ್ರರಂಗದಲ್ಲಿ ಪರ, ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ರಮ್ಯಾ ಅವರು ಕಮಲ್ ಅವರ ಚಿತ್ರ ನಿಷೇಧ ಅತಿರೇಕ ಎಂದಿದ್ದಾರೆ. ಕಿಶೋರ್ ಅವರು ಕಮಲ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
—-

Be the first to comment