ರಮೇಶ್ ಗೆ ಕಾರಂತ ಪ್ರಶಸ್ತಿ ಪ್ರದಾನ

ನಟ, ನಿರ್ದೇಶಕ ರಮೇಶ್ ಅರವಿಂದ್ ಅವರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬ್ರಹ್ಮಾವರ ತಾಲ್ಲೂಕಿನ ಕೋಟ ಗಿಳಿಯಾರು ಶಾಂಭವಿ ಶಾಲೆಯ ಆವರಣದಲ್ಲಿ ನಿನ್ನೆ ಡಾ.ಶಿವರಾಮ ಕಾರಂತ ಟ್ರಸ್ಟ್‌, ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಹಾಗೂ ಕೋಟತಟ್ಟು ಪಂಚಾಯಿತಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಕಾನೂನು, ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಶಸ್ತಿ ನೀಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಮೇಶ್‌ ಅವರು, ‘ಕಾರಂತರ ಕುತೂಹಲ, ವೈಜ್ಞಾನಿಕ ಚಿಂತನೆ ಅದ್ಭುತ. ಎಲ್ಲರಲ್ಲೂ ಅಗಾಧ ಶಕ್ತಿಯಿದ್ದು ಹೊರಗೆಳೆಯುವ ಪ್ರಯತ್ನ ಮಾಡಬೇಕು’ ಎಂದು ಹೇಳಿದರು.

ಪ್ರಶಸ್ತಿ ಕಾರಂತರ ಬೆಳ್ಳಿಯ ಫಲಕ, ಸನ್ಮಾನ ಪತ್ರ ಒಳಗೊಂಡಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!