ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ದೇವರಾಜ್

ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ನಟ ದೇವರಾಜ್ ಭಾಜನರಾಗಿದ್ದಾರೆ.

ಒಟ್ಟು 66 ಮಂದಿಯ ಹೆಸರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿದ್ದು ಈ ಪೈಕಿ ಸಿನಿಮಾ ಕ್ಷೇತ್ರದಿಂದ ದೇವರಾಜ್ ಅವರು ಪ್ರಶಸ್ತಿಗೆ ಪಾತ್ರವಾಗಿದ್ದಾರೆ.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸೇವಾ ಸಿಂಧು ವೆಬ್ ಸೈಟ್ ಮೂಲಕ ಸಾರ್ವಜನಿಕರು ಮಾಡಿದ್ದ ಶಿಫಾರಸನ್ನು ಪರಿಗಣಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ನೀಡಲಾಗುತ್ತಿದೆ. ಈ ವರ್ಷ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ 66 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ಸಹ ಈ ಬಾರಿ ಘೋಷಣೆ ಮಾಡಲಾಗಿದೆ.

200ಕ್ಕೂ ಹೆಚ್ಚು ಚಲನ ಚಿತ್ರಗಳಲ್ಲಿ ನಟಿಸಿರುವ ದೇವರಾಜ್ ಅವರು ಡೈನಾಮಿಕ್ ಹೀರೋ ಎಂದೇ ಪ್ರಸಿದ್ಧರಾಗಿದ್ದಾರೆ. ಶಂಕರನಾಗ್ ಅವರ ಜೊತೆ ನಾಟಕಗಳಲ್ಲಿ ನಟಿಸುತ್ತಿದ್ದ ದೇವರಾಜ್ ಅವರು ತ್ರಿಶೂಲ ಚಿತ್ರದಲ್ಲಿ ಪೋಷಕ ನಟನಾಗಿ ಚಿತ್ರರಂಗವನ್ನು ಪ್ರವೇಶಿಸಿದರು. ಬಳಿಕ ಹೀರೋ ಆಗಿ ನಟಿಸಿದ ಅವರು ಪೊಲೀಸ್ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡರು. ಕನ್ನಡ ಅಲ್ಲದೆ ತಮಿಳು ಹಾಗೂ ತೆಲುಗು ಚಲನಚಿತ್ರಗಳಲ್ಲಿ ಅವರು ನಟಿಸಿದ್ದಾರೆ.
______

Be the first to comment

Leave a Reply

Your email address will not be published. Required fields are marked *

Translate »
error: Content is protected !!