ನ.16ರಂದು ಪುನೀತ್ ನಮನ ಕಾರ್ಯಕ್ರಮ

ನಟ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದ ವತಿಯಿಂದ ನ.16ರಂದು ‘ಪುನೀತ್ ನಮನ’ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ನಮನ ಸಲ್ಲಿಸುವ ಉದ್ದೇಶದಿಂದ ‘ಪುನೀತ್ ನುಡಿ ನಮನ’ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ಹೇಳಿದ್ದಾರೆ.

ನ.16ರಂದು ಕಾರ್ಯಕ್ರಮ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮತಿ ನೀಡಿದ್ದಾರೆ. ಕಾರ್ಯಕ್ರಮದ ರೂಪರೇಷೆ ಸಿದ್ಧಪಡಿಸಲಾಗುತ್ತಿದ್ದು, ತೆಲುಗು, ತಮಿಳು ಚಿತ್ರರಂಗದವರನ್ನು ಕರೆಯಲು ನಿರ್ಧಾರ ಮಾಡಲಾಗಿದೆ. ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘದಿಂದ ಜಂಟಿಯಾಗಿ ಕಾರ್ಯಕ್ರಮ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಸಂಗೀತ ನಮನ ಕೂಡ ಇರಲಿದೆ. ಸಂಗೀತ ನಮನದ ಉಸ್ತುವಾರಿಯನ್ನು ಗುರುಕಿರಣ್ ವಹಿಸಿಕೊಂಡಿದ್ದಾರೆ. ಚಿತ್ರರಂಗದವರಿಗೆ ಮಾತ್ರ ಸೀಮಿತವಾದ ಕಾರ್ಯಕ್ರಮ ಇದಾಗಿದ್ದು, ರಾಜ್ ಕುಟುಂಬದ ಸದಸ್ಯರು ಭಾಗವಹಿಸಲಿದ್ದಾರೆ. ಚಿತ್ರರಂಗದ ಎಲ್ಲಾ ಸಂಘಟನೆ ,ಸಂಘ ಸಂಸ್ಥೆಗಳು ಭಾಗವಹಿಸಲು ಮನವಿ ಮಾಡಿದ್ದೇವೆ. ಸಾರ್ವಜನಿಕರು ಮಾಧ್ಯಮಗಳ ಮೂಲಕ ಕಾರ್ಯಕ್ರಮ ನೋಡಿ ಸಹಕರಿಸಬೇಕು ಎಂದು ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ವಿನಂತಿ ಮಾಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!