ಕಾಟೇರ 2 ಬರಲ್ಲ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ನಾನು ಗೆದ್ದಿತ್ತಿನ ಬಾಲ ಹಿಡಿಯೋದಿಲ್ಲ. ‘ಕಾಟೇರ 2’ ಬರಲ್ಲ ಎಂದಿದ್ದಾರೆ.

ದರ್ಶನ್ ನಟನೆಯ ಕಾಟೇರ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಹಿಟ್ ಆಗುತ್ತಿದ್ದಂತೆ ಸೀಕ್ವೆಲ್ ಬರುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ದರ್ಶನ್,   ‘ಕಾಟೇರ 2’ ಬರಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

”ನಾನು ಸೀಕ್ವೆಲ್​ ಮಾಡುವುದಿಲ್ಲ. ಕಾಟೇರ ಅಲ್ಲಿಗೆ ಮುಗಿಯಿತು. ನನಗೆ ಸೀಕ್ವೆಲ್​ ಇಷ್ಟವಿಲ್ಲ. ಗೆದ್ದ ಎತ್ತಿನ ಬಾಲ ಹಿಡಿಯಬಾರದು. ಕಾಟೇರ ಕಥೆಯನ್ನು ಇನ್ನೂ ಎಳೆಯಬಾರದು” ಎಂದು ದರ್ಶನ್​ ಹೇಳಿದ್ದಾರೆ.

ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ.  1970ರ ಕಾಲಘಟ್ಟದ ಕಥೆಯನ್ನುನಿರ್ದೇಶಕ ತರುಣ್ ಸುಧೀರ್ ತೆರೆಮೇಲೆ ತಂದಿದ್ದರು . ಕಾಟೇರ ಮೂಲಕ ಸ್ಯಾಂಡಲ್ ವುಡ್ ಗೆ ಭರ್ಜರಿ ಎಂಟ್ರಿಕೊಟ್ಟ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಗೂ ದೊಡ್ಡ ಹೆಸರು ನೀಡಿತ್ತು. ಕಥೆ ಬರೆದ ಜಡೇಶ್ ಕುಮಾರ್ ಹಂಪಿ, ಡೈಲಾಗ್ ಬರೆದ ಮಾಸ್ತಿಗೂ ಕಾಟೇರ ಸಿನಿಮಾ ಮರೆಯಲಾಗದ ಯಶಸ್ಸು ನೀಡಿತ್ತು.

ಕಾಟೇರ ಸಿನಿಮಾ ಹಿಟ್ ಆಗುತ್ತಿದ್ದಂತೆ ನಿರ್ದೇಶಕ ತರುಣ್​ ಸುಧೀರ್​, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ನಟ ದರ್ಶನ್ ಅವರ ಕಾಂಬಿನೇಷನ್​ನಲ್ಲಿ ಇನ್ನೊಂದು ಸಿನಿಮಾ ಬರಲಿ ಎಂದು ಫ್ಯಾನ್ಸ್​ ನಿರೀಕ್ಷಿಸುತ್ತಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!