kranthi ನಿರೀಕ್ಷೆ ಹುಟ್ಟಿಸಿದ ಕ್ರಾಂತಿ ಟ್ರೈಲರ್

ಕ್ರಾಂತಿ ಚಿತ್ರದ ಬಹು ನಿರೀಕ್ಷಿತ ಟ್ರೈಲರ್ ಚಿತ್ರತಂಡ, ಸಿಬ್ಬಂದಿ ಮತ್ತು ದರ್ಶನ್ ಅಭಿಮಾನಿಗಳ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆಗೊಂಡಿದೆ.

ಟ್ರೈಲರ್ ನ್ನು ರಾಜ್ಯಾದ್ಯಂತ 130ಕ್ಕೂ ಹೆಚ್ಚು ಪರದೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲಾಯಿತು. ಶಿಕ್ಷಣ ವ್ಯವಸ್ಥೆ ಮತ್ತು ವಿಶೇಷವಾಗಿ ಸರ್ಕಾರಿ ಶಾಲೆಗಳ ಸದ್ಯದ ಪರಿಸ್ಥಿತಿ ಬಗ್ಗೆ ಕ್ರಾಂತಿ ಟ್ರೈಲರ್ ಮಾತನಾಡುತ್ತದೆ.

ಚಿತ್ರದಲ್ಲಿ ದರ್ಶನ್ ವಿದೇಶದಲ್ಲಿ ನೆಲೆಸಿರುವ ಮತ್ತು ಭಾರತಕ್ಕೆ ಬರುವ ಉದ್ಯಮಿಯಾಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ನಲ್ಲಿ ರವಿಚಂದ್ರನ್, ಉಮಾಶ್ರೀ ಮತ್ತು ಮುಖ್ಯಮಂತ್ರಿ ಚಂದ್ರು ಅವರ ಪಾತ್ರಗಳನ್ನು ತೋರಿಸಲಾಗಿದೆ. ಚಿತ್ರ ಜನವರಿ 26 ರಂದು ತೆರೆಗೆ ಬರಲಿದೆ.

ನಾಯಕಿ ರಚಿತಾ ರಾಮ್, ನಿಮಿಕಾ ರತ್ನಾಕರ್, ಸಂಯುಕ್ತ ಹೊರನಾಡ್ ಮತ್ತು ವೈನಿಧಿ ಜಗದೀಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಇಡೀ ಚಿತ್ರತಂಡವು ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು. ಸಮಾರಂಭದಲ್ಲಿ ನಟಿ, ರಾಜಕಾರಣಿ ಸುಮಲತಾ ಅಂಬರೀಶ್ ಅವರು ಉಪಸ್ಥಿತರಿದ್ದರು.

ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಅವರ ನಿರ್ದೇಶನದಲ್ಲಿ ಮತ್ತು ಶೈಲಜಾ ನಾಗ್ ಮತ್ತು ಬಿ ಸುರೇಶ ಅವರ ಮೀಡಿಯಾ ಹೌಸ್ ಸ್ಟುಡಿಯೋಸ್ ಅಡಿ ನಿರ್ಮಾಣಗೊಂಡಿರುವ ಕ್ರಾಂತಿ ಸಿನಿಮಾಕ್ಕೆ ಕರುಣಾಕರ್ ಅವರ ಛಾಯಾಗ್ರಹಣವಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!