leelavati: ವಿನೋದ್‌ ರಾಜ್‌ ಮದುವೆ ಬಗ್ಗೆ ಲೀಲಾವತಿ ಹೇಳಿದ್ದೇನು?

600 ಸಿನಿಮಾಗಳಲ್ಲಿ ನಟಿಸಿದ್ದರೂ ಇರೋ ಒಬ್ಬ ಮಗನ ಮದುವೆ ವಿಜ್ರಂಭಣೆಯಿಂದ ಮಾಡೋಕೆ ಆಗಲಿಲ್ಲ ಎಂದು ಅನಿಸಿದೆ ಎಂದು ಹಿರಿಯ ನಟಿ ಲೀಲಾವತಿ ಹೇಳಿದ್ದಾರೆ.

ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು, ಲೀಲಾವತಿ ಮಗ ವಿನೋದ್‌ ರಾಜ್‌ ಮದುವೆ ಆಗಿದ್ದು, ಅವರಿಗೆ ಮಗ ಇದ್ದಾರೆ ಎಂದು ಸಾಕ್ಷಿಸಹಿತ ಮಾಹಿತಿ ನೀಡಿದ್ದರು. ಈಗ ಈ ಬಗ್ಗೆ ಲೀಲಾವತಿ ಸ್ಪಷ್ಟನೆ ನೀಡಿದ್ದಾರೆ.

‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ ತಿರುಪತಿ ಬೆಟ್ಟದ ಮೇಲೆ ಸಿಂಪಲ್ ಆಗಿ ಮದುವೆ ಮಾಡಿದೆ. ಎಂಥೆಂಥವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಹಾಗಾಗಿ ಅದನ್ನುರಹಸ್ಯವಾಗಿ ಇಡುವುದೇ ಒಳ್ಳೆಯದು ಎನಿಸಿತುʼʼ ಎಂದು ಬೇಸರದಿಂದ ಹೇಳಿದ್ದಾರೆ.

“ಅವನೇನು ಹೆಣ್ಣು ಹುಡುಗಿ ಅಲ್ಲ, ಕದ್ದು ಬಸುರಾಗಿದ್ದಕ್ಕೆ ಮದ್ವೆ ಮಾಡಿಸಿದೆ ಎಂದು ಹೇಳುವುದಿಲ್ಲ. ಪವಿತ್ರವಾಗಿ ಇದ್ದಾನೆ. ನನಗೆ ಒಳ್ಳೆ ಮಗನಾಗಿ ಇದ್ದಾನೆ. ನಾನೇ ಇಷ್ಟಪಟ್ಟು ಮದುವೆ ಮಾಡಿಸಿದೆ. ತಿರುಪತಿ ಬೆಟ್ಟದ ಮೇಲೆ ಮದುವೆ ಮಾಡಿಸಿದೆ. ನನಗೆ ಅನ್ನಿಸಿತು ಅದು ಶ್ರೇಷ್ಠ ಜಾಗ ಅಂತ” ಎಂದಿದ್ದಾರೆ.

” ಏಳೇ ಜನ ಕನ್ನಡಿಗರು ಈ ಮದುವೆಯಲ್ಲಿ ಭಾಗವಹಿಸಿದ್ದರು. ಯಾಕೆ ನಿಮಗೆ ಇಷ್ಟೇ ಜನ ಸಿಕ್ಕರೆ? ಎಂಬ ಮಾತು ಕೇಳಿ ಬಂದರೂ, ನಾನು ಮಾತನಾಡಿರಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆʼʼ ಎಂದು ನುಡಿದಿದ್ದಾರೆ.

“ನನ್ನ ಆತ್ಮಸಾಕ್ಷಿಗೆ ನಾನು ಸರಿಯಾಗಿಯೇ ಇದ್ದೇನೆ. ಕಡು ಬಡವಳು ನಾನು. ಜಮೀನು ತೆಗೆದುಕೊಂಡಿದ್ದು, 30 ಸಾವಿರಕ್ಕೆ. ಸೊಸೆಗೆ ಒಳ್ಳೆಯ ಬಂಗಲೆ ಇದೆ. ನನಗೆ ನೋವುಂಟು ಮಾಡುವವರು ನರಕದಲ್ಲಿ ಬೀಳ್ತಾರೆ” ಎಂದು ಲೀಲಾವತಿ ಕಿಡಿ ಕಾರಿದ್ದಾರೆ.

ಈ ಬಗ್ಗೆ ಮಾತನಾಡಿರುವ ವಿನೋದ್‌ ರಾಜ್‌, ಅಮ್ಮಾಇಳಿವಯಸ್ಸಿನಲ್ಲಿದ್ದಾರೆ. ನೆಮ್ಮದಿಯಾಗಿದ್ದಾರೆ. ನೆಮ್ಮದಿಯಾಗಿ ಇರೋಕೆ ಬಿಡಿ. ಅವರು ಕರ್ನಾಟಕದ ಆಸ್ತಿ. ಆಸ್ತಿನಾ ಅಸ್ಥಿ ಮಾಡಲು ಹೋಗಬೇಡಿ ಅಷ್ಟೇ ಎಂದು ವಿನಂತಿ ಮಾಡಿದ್ದಾರೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!