ಐದಾರು ಮಂದಿ ಪಕ್ಕಾ ಪ್ಲ್ಯಾನ್ ಮಾಡಿ ನನ್ನ ಮುಗಿಸಿದ್ರು ಎಂದು ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ಹೇಳಿದ್ದಾರೆ.
ಸಹ ನಟಿ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮನು ಅವರಿಗೆ ಜಾಮೀನು ನೀಡಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು. ಸಾಕಷ್ಟು ಅಡೆ-ತಡೆಗಳ ನಡುವೆ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ರಿಲೀಸ್ ಆಗಿದೆ. ನನ್ನ ವಿರುದ್ಧ ಪ್ರತಿ ಹಂತದಲ್ಲಿ ಷಡ್ಯಂತ್ರ ನಡೆಯಿತು. ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ರಿಲೀಸ್ ಮೊದಲು ಕುಣಿಗಲ್ ಬಳಿ ಮೊಟ್ಟೆ ಒಡೆದರು. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದರು ಎಂದು ಹೇಳಿದ್ದಾರೆ.
ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಬಗ್ಗೆ ಮಾತನಾಡಿದ ಆಡಿಯೋ ನನ್ನದಲ್ಲ. ನಾನು ಶಿವಣ್ಣ, ದರ್ಶನ್ ಮತ್ತು ಧ್ರುವ ಬಗ್ಗೆ ಮಾತನಾಡಿಲ್ಲ. ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ ಸತ್ಯವನ್ನು ವಿವರಿಸಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನುವನ್ನು ಹಾಸನ ಬಳಿಯ ಶಾಂತಿಗ್ರಾಮದ ಬಳಿ ಗುರುವಾರ ಬಂಧಿಸಿದ್ದರು.
—-

Be the first to comment