ವಿಭಿನ್ನ ಕಥಾಹಂದರದ  ಮಂಗಳವಾರ ರಜಾದಿನ ಫೆಬ್ರವರಿ 5ಕ್ಕೆ ಬಿಡುಗಡೆ.

ಶೀರ್ಷಿಕೆಯಲ್ಲೇ ವಿಭಿನ್ನತೆಯಿರುವ  ಮಂಗಳವಾರ ರಜಾದಿನ  ಚಿತ್ರ ಫೆಬ್ರವರಿ 5 ರಂದು ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಯು/ಎ ಪತ್ರ ನೀಡಿದೆ.

ಕ್ಷೌರಿಕನೊಬ್ಬನಿಗೆ ನಟ ಸುದೀಪ್ ಅವರಿಗೆ ಕೇಶವಿನ್ಯಾಸ ಮಾಡಬೇಕೆಂದು ಆಸೆ ಇರುತ್ತದೆ. ಈ ಆಸೆ ಏನಾಗುತ್ತದೆ? ಎನ್ನುವುದೆ ಚಿತ್ರದ ಕಥಾಸಾರಾಂಶ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮೊದಲ ಬಾರಿಗೆ ತಂದೆ – ಮಗನ ಬಾಂಧವ್ಯದ ಹಾಡೊಂದನ್ನು ಹಾಡಿದ್ದಾರೆ. ಗೌಸ್ ಫಿರ್  ಬರೆದಿರುವ ಈ ಹಾಡಿಗೆ ಋತ್ವಿಕ್‌ ಮುರಳಿಧರ್  ಸಂಗೀತ ನೀಡಿದ್ದಾರೆ.
ಗಣರಾಜ್ಯೋತ್ಸವದ ದಿನ ಈ ಹಾಡು ಬಿಡುಗಡೆಯಾಗಲಿದೆ. ‌

ಹಾಡಿನ ಪ್ರೋಮೊ ಈಗಾಗಲೇ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.  ಸ್ಟುಡಿಯೋ 18 ನ ಸುಧೀರ್ ಕೆ.ಎಂ( ಬ್ಯಾಡ್ ಮ್ಯಾನರ್ಸ್ ಚಿತ್ರದ ನಿರ್ಮಾಪಕರು) ಈ ಚಿತ್ರವನ್ನು ವೀಕ್ಷಿಸಿ ಸಂತಸಗೊಂಡು ತಾವೇ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ತ್ರಿವರ್ಗ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಯವಿನ್ ನಿರ್ದೇಶಿಸಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಚಂದನ್ಆಚಾರ್ ನಾಯಕನಾಗಿ ನಟಿಸಿದ್ದಾರೆ. ಚಂದನ್ ಆಚಾರ್ ಈ ಚಿತ್ರದಲ್ಲಿ ಕ್ಷೌರಿಕನ ಪಾತ್ರ ನಿರ್ವಹಣೆ ಮಾಡಿದ್ದಾರೆ. ಲಾಸ್ಯ ನಾಗರಾಜ್ ಈ ಚಿತ್ರದ ನಾಯಕಿ. ‌ ಜಹಂಗೀರ್, ರಜನಿಕಾಂತ್, ಗೋಪಾಲ್ ದೇಶಪಾಂಡೆ, ನಂದನ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜೋತ್ ಡೇಸಾ ಸಂಗೀತ ನೀಡಿದ್ದಾರೆ. ಋತ್ವಿಕ್‌ ಮುರಳೀಧರ್ ಹಿನ್ನೆಲೆ ಸಂಗೀತ, ಉದಯ್ ಲೀಲಾ ಛಾಯಾಗ್ರಹಣ ಹಾಗೂ ಮಧು ತುಂಬಕೆರೆ ಸಂಕಲನ ಈ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!