ಸೆ.16ಕ್ಕೆ ಮರ್ದಿನಿ ತೆರೆಗೆ

ಕಿರಣ್ ಕುಮಾರ್ ವಿ ನಿರ್ದೇಶಿಸಿರುವ “ಮರ್ದಿನಿ” ಚಿತ್ರದ ಟ್ರೇಲರ್ ಹಾಗೂ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು.

ಅಂಕಿತ್ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ರಿತನ್ಯ ಹೂವಣ್ಣ “ಮರ್ದಿನಿ” ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

ಅಡುಗೆಮನೆಯಿಂದ ಆರ್ಮಿ ತನಕ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಯಾರಿಗೂ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸುತ್ತಿದ್ದಾಳೆ. ಇತ್ತೀಚೆಗೆ ಕೊರೋನ ಸಮಯದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣಪಣಕ್ಕಿಟ್ಟು ಸೇವೆ ಸಲ್ಲಿಸಿದ್ದು ನಮ್ಮ ಕಣ್ಣ ಮುಂದೆ ಇದೆ. ಈ ಎಲ್ಲಾ ಅಂಶಗಳನಿಟ್ಟುಕೊಂಡು ಉತ್ತಮ ಮನೋರಂಜನೆ ಇರುವ ಸಿನಿಮಾ ಮಾಡಿದ್ದೀನಿ. ಚಿತ್ರ ಸೆಪ್ಟೆಂಬರ್ 16 ರಂದು ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಕಿರಣ್ ಕುಮಾರ್ ಹೇಳಿದರು.

ನಾನು ಸುದೀಪ್ ಅವರ ಅಭಿಮಾನಿ. ಕಳೆದ ಹದಿನೆಂಟು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟಿದೆ. ಸಾವಿರಾರು ಚಿತ್ರಗಳಿಗೆ ಸ್ಟ್ಯಾಂಡಿಸ್‌, ಬ್ಯಾನರ್ ಗಳನ್ನು ಮಾಡಿದ್ದೀನಿ. ಸಿನಿಮಾ ನಿರ್ಮಾಣ ಮಾಡಿ ಹೊಸ ಕಲಾವಿದರಿಗೆ ಅವಕಾಶ ನೀಡಬೇಕೆಂದು ಆಸೆಯಿತ್ತು. “ಮರ್ದಿನಿ” ಚಿತ್ರದ ಮೂಲಕ ಈಡೇರಿದೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಿರ್ಮಾಪಕ ಜಗ್ಗಿ.

ಚಿತ್ರಕ್ಕೆ ಆಡಿಷನ್ ಮೂಲಕ ಆಯ್ಕೆಯಾದೆ. ಖಡಕ್ ಪೊಲೀಸ್ ಅಧಿಕಾರಿಯಾಗಿ‌ ಕಾಣಿಸಿಕೊಂಡಿದ್ದೇನೆ. ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿಯನ್ನು ಮಾಡಿಕೊಂಡಿದ್ದೇನೆ ಎಂದರು ನಾಯಕಿ ರಿತನ್ಯ ಹೂವಣ್ಣ.

ಚಿತ್ರಕ್ಕೆ ನಾನು ಕಥೆ ಬರೆದಿದ್ದೇನೆ. ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದೇನೆ ಎಂದು ಅಕ್ಷಯ್ ತಿಳಿಸಿದರು.

ನಟಿ ಇಂಚರ ಹಾಗೂ ಸುಷ್ಮಿತ ಸಹ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು. ಸಂಗೀತ ನೀಡಿರುವ ಹಿತನ್ ಹಾಸನ್, ಸಂಕಲನಕಾರ ವಿಶ್ವ, ಸಂಭಾಷಣೆ ಬರೆದಿರುವ ಕರಣ್ ಗಜ , ವಿತರಕ ವೆಂಕಟ್ ಗೌಡ ಸೇರಿದಂತೆ ಚಿತ್ರತಂಡದ ಸದಸ್ಯರು ಇದ್ದರು.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!