ವಿಮಾನ ದುರಂತದಿಂದ ಪಾರಾದ ಮಾರ್ಟಿನ್ ಟೀಂ

ಕೂದಲೆಳೆ ಅಂತರದಲ್ಲಿ ವಿಮಾನ ದುರಂತದಿಂದ ಧ್ರುವ ಸರ್ಜಾ ಮತ್ತು ಮಾರ್ಟಿನ್ ಟೀಂ ಪಾರಾಗಿದೆ.

ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡ ಸೋಮವಾರ ಸಂಜೆ ಸಾಂಗ್ ಶೂಟ್‍ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆಗೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಪೈಲಟ್ ಪರದಾಡಿದ್ದಾರೆ.  ಕೊನೆಗೆ ಪೈಲಟ್‍ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡ ವಿಮಾನ ಇಳಿಯುವ ಸಂದರ್ಭದಲ್ಲಿ ವೀಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ.

ಡಿಯೋದಲ್ಲಿ ಚಿತ್ರದ ನಿರ್ದೇಶಕ ಎ ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದಾರೆ. ಈ ಬಗ್ಗೆ ನಟ ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

”ಮೊದಲ ಬಾರಿಗೆ ಸಾವನ್ನು ಎದುರಿಸಿ ಮತ್ತೆ ಜೀವ ಸಿಕ್ಕಂತಾಗಿದೆ. ಇದು ನನ್ನ ತಂದೆ ತಾಯಿಯರ, ನನ್ನ ವಿಐಪಿಗಳ ಮತ್ತು ನನ್ನ ದೇವರು ಚಿರು ಅಣ್ಣನ ಅವರ ಸಂಪೂರ್ಣ ಆಶೀರ್ವಾದದ ಫಲ. ಇದು ಪುನರ್ಜನ್ಮವಾಗಿದೆ. ನಮಗೆಲ್ಲರಿಗೂ ಜೀವನವನ್ನು ಪೂರ್ಣವಾಗಿ ಬದುಕಲು ಅವಕಾಶ ಮತ್ತೆ ಸಿಕ್ಕಿದೆ. ಜೈ ಆಂಜನೇಯ” ಎಂದು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!