ಫೆಬ್ರವರಿ 23 ರಂದು ‘ಮತ್ಸ್ಯಗಂಧ’ ಬಿಡುಗಡೆ

ಪೃಥ್ವಿ ಅಂಬಾರ್ ಅಭಿನಯದ ‘ಮತ್ಸ್ಯಗಂಧ’ ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಕಾಣಲಿದೆ.

ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ.  ಈ ಸಿನಿಮಾದಲ್ಲಿ ಕರಾವಳಿ ಮೀನುಗಾರರ ಸಂಪ್ರದಾಯ ಹಾಗೂ ಹೋರಾಟವನ್ನು ತೋರಿಸಲಾಗಿದೆ. ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದು ಈ ಸಿನಿಮಾ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕುಮಟಾ ಭಾಗದಲ್ಲಿ ನಡೆಯುವ ಕಥೆ ಈ ಚಿತ್ರದಲ್ಲಿದೆ. ಬಹಳ ರಿಯಲಿಸ್ಟಿಕ್‌ ಕಥೆಯಿರುವ ಈ ಸಿನಿಮಾವನ್ನು ಮಾಸ್‌ ಎನ್ನಲಾಗುವುದಿಲ್ಲ. ಇದೇ ಮೊದಲ ಬಾರಿಗೆ ನಾನು ಪೊಲೀಸ್‌ ಪಾತ್ರ ಮಾಡುತ್ತಿರುವ ಕಾರಣ ದೇಹ ದಂಡನೆ ಮಾಡುತ್ತಿದ್ದೇನೆ. ನನ್ನ ಸ್ನೇಹಿತರು ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ ಎಂದು  ಪೃಥ್ವಿ ಅಂಬಾರ್‌ ಹೇಳಿದ್ದಾರೆ.

ಸಹ್ಯಾದ್ರಿ ಪ್ರೊಡಕ್ಷನ್ ಬ್ಯಾನರ್ ನಡಿ ವಿಶ್ವನಾಥ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಶ್ರೀನಿವಾಸ್ ಸಂಕಲನ, ಪ್ರವೀಣ್ ಛಾಯಾಗ್ರಹಣ, ಪ್ರಶಾಂತ್ ಸಿದ್ದಿ ಸಂಗೀತ ಸಂಯೋಜನೆ ಮಾಡಿದ್ದಾರೆ.

ಭಜರಂಗಿ ಲೋಕಿ, ಶರತ್ ಲೋಹಿತಾಶ್ವ, ಪ್ರಶಾಂತ್ ಸಿದ್ಧಿ, ನಾಗರಾಜ್ ಬೈಂದೂರ್, ಅಶೋಕ್ ಹೆಗಡೆ, ಸತೀಶ್ ಚಂದ್ರ, ಧಿಶಾ ಶೆಟ್ಟಿ, ಅಂಜಲಿ ಪಾಂಡೆ, ಪ್ರತಿಮಾ ನಾಯಕ್, ಗೌತಮ್, ದೀಪಾ ಶ್ರೀನಿವಾಸ್, ಕಾಂತರಾಜ್ ಕಡ್ಡಿಪುಡಿ ತಾರಾಬಳಗವಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!