ಮತ್ತೆ ಉದ್ಭವ’ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ವೈಟ್ ಪ್ಯಾಂಥರ್ಸ್ ಕ್ರಿಯೇಟರ್ಸ್ ಸಂಸ್ಥೆಯವರು ನಿರ್ಮಿಸುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ `ಮತ್ತೆ ಉದ್ಭವ` ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಚಿತ್ರಕ್ಕೆ 20ದಿನಗಳ ಚಿತ್ರೀಕರಣ ನಡೆದಿದೆ.

ವಿ.ಮನೋಹರ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಅವರ ಛಾಯಾಗ್ರಹಣವಿದೆ. ಎಸ್.ಮೋಹನ್ ಸಂಭಾಷಣೆ ಬರೆದಿದ್ದಾರೆ. ವಸಂತ್‍ರಾವ್ ಕುಲಕರ್ಣಿ ಕಲಾನಿರ್ದೇಶನ ಹಾಗೂ ಅಪೇಕ್ಷ ಪುರೋಹಿತ್ ಅವರ ವಸ್ತ್ರ ವಿನ್ಯಾಸವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಗುರುಪ್ರಸಾದ್ ಮುದ್ರಾಡಿ.
‘ಪ್ರಿಮಿಯರ್ ಪದ್ಮಿನಿ` ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮಿಲನ ನಾಗರಾಜ್. ಅವಿನಾಶ್, ರಂಗಾಯಣ ರಘು, ಮೋಹನ್, ಸುಧಾ ಬೆಳವಾಡಿ, ಶುಭ ರಕ್ಷ, ಮಂಡ್ಯ ರವಿ, ಪಿ.ಡಿ.ಸತೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ

This Article Has 1 Comment
  1. Pingback: solar panel Installation Country Walk FL

Leave a Reply

Your email address will not be published. Required fields are marked *

Translate »
error: Content is protected !!