ಸಂಗೀತ ನಿರ್ದೇಶನ ಡಾ. ಕಿರಣ್ ಮೇಲೆ ಹಲ್ಲೆ

“ಐ ಲವ್ ಯೂ” ಸಿನಿಮಾದ ಸಂಗೀತ ನಿರ್ದೇಶಕ ಡಾ.ಕಿರಣ್ ಮೇಲೆ ಅಪರಿಚಿತರು ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರ್.ಆರ್.ನಗರದಲ್ಲಿ ಭಾನುವಾರ ರಾತ್ರಿ 2.30ರ ವೇಳೆಗೆ ಹಲ್ಲೆ ನಡೆದಿದೆ. ಸಂಗೀತ ನಿರ್ದೇಶಕ ಕಿರಣ್ ಅವರು ದಿವಂಗತ ಸಂಚಾರಿ ವಿಜಯ್ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ಅಪರಿಚಿತ ವ್ಯಕ್ತಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದು ಪೊಲೀಸರು ಈ ಬಗ್ಗೆ ದೂರು ದಾಖಲು ಮಾಡಿದ್ದಾರೆ. ಘಟನೆಯಲ್ಲಿ ಡಾ.ಕಿರಣ್ ಅವರ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಲ್ಲೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಅನುಮಾನ ಇರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕುವ ಕೆಲಸ ನಡೆಸಿದ್ದಾರೆ.

ಡಾ. ಕಿರಣ್ ಮೇಲೆ ಹಲ್ಲೆ ನಡೆದ ಬಗ್ಗೆ ಇದುವರೆಗೆ ಯಾವುದೇ ಕಾರಣ ತಿಳಿದು ಬಂದಿಲ್ಲ. ಕನ್ನಡ ಚಿತ್ರರಂಗದ ಕಲಾವಿದರು ಘಟನೆಯ ಬಗ್ಗೆ ಖೇದ ವ್ಯಕ್ತ ಪಡಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!