“ನನ್ನ ಹುಡುಕಿ ಕೊಡಿ” ಚಿತ್ರಕ್ಕೆ ಚಾಲನೆ

ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನಡೆಯಿತು.

ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಆರಂಭ ಫಲಕ ತೋರಿದರು. ನಿರ್ದೇಶಕ ಮಹೇಶ್ ಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು.

ಕನಕಪುರದ ಧನ್ವಿತ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸುವ ಜೊತೆಗೆ ಬಂಡವಾಳವನ್ನು ಹೂಡುತ್ತಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿದೆ.

ಮುಂದಿನವಾರದಿಂದ ಚಿತ್ರೀಕರಣ ಆರಂಭಿಸುತ್ತೇವೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ಮೀನಾಕ್ಷಿ ಜೈಸ್ವಾಲ್, ಸಾಯಿ ನಯನ ಈ ಚಿತ್ರದ ನಾಯಕಿಯರು. ಪೋಷಕಪಾತ್ರಗಳಲ್ಲಿ ಕನ್ನಡದ ಪ್ರಸಿದ್ದ ಕಲಾವಿದರು ಅಭಿನಯಿಸಲಿದ್ದಾರೆ ಎಂದು ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.

ನಾನು ಮೂಲತಃ ಕನಕಪುರದವನು. ಹಿಂದೆ ವೇಮಗಲ್ ಜಗನ್ನಾಥ ರಾವ್ ಅವರ ನಿರ್ದೇಶನದ “ಆವರ್ತ” ಚಿತ್ರದಲ್ಲಿ ಒಂದು ಪಾತ್ರ‌ ಮಾಡಿದ್ದೆ‌. ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಧನ್ವಿತ್ ಫಿಲಂ ಫ್ಯಾಕ್ಟರಿ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಾನೇ ನಿರ್ಮಾಣ ಮಾಡುತ್ತಿದ್ದೇನೆ. ವಾಸುಕಿ ಭುವನ್ ಅವರು ನಿರ್ಮಾಣಕ್ಕೆ ಜೊತೆಯಾಗಿದ್ದಾರೆ. ನಿರ್ದೇಶಕರು ಪೂರ್ತಿ ಕಥೆ ಹೇಳಿಲ್ಲ. ಒಂದೆಳೆ ಹೇಳಿದ್ದಾರೆ. ತುಂಬಾ ಚೆನ್ನಾಗಿದೆ ಎಂದು ನಾಯಕ ಹಾಗೂ ನಿರ್ಮಾಪಕ ಧನ್ವಿತ್ ಹೇಳಿದ್ದಾರೆ.

ನಾಯಕಿಯರಾದ ಮೀನಾಕ್ಷಿ ಜೈಸ್ವಾಲ್, ಸಾಯಿ ನಯನ ಹಾಗೂ ಛಾಯಾಗ್ರಾಹಕ ಸೂರ್ಯಕಾಂತ್ ಇದ್ದರು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!