23ರಂದು ತೆರೆಗೆ ಬರುತ್ತಿದೆ ‘ನನ್ನ ಪ್ರಕಾರ’ ಚಿತ್ರ

ಜಿ.ವಿ.ಕೆ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಗುರುರಾಜ್ ಎಸ್ ಅವರು ನಿರ್ಮಾಣ ಮಾಡಿರುವನನ್ನ ಪ್ರಕಾರ’ ಚಿತ್ರ ಆಗಸ್ಟ್ 23ರಂದು ತೆರೆಗೆ ಬರಲಿದೆ. ಅಂದು ಚಿತ್ರದ ನಾಯಕಿ ಪ್ರಿಯಾಮಣಿ ಅವರ ವಿಬಾಹ ವಾರ್ಷಿಕೋತ್ಸವ ಕೂಡ.

ಈ ಶುಭ ಸಂದರ್ಭದಲ್ಲಿ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ಸಂತಸದ ವಿಷಯ ಎಂದು ನಿರ್ದೇಶಕ ವಿನಯ್ ಬಾಲಾಜಿ ತಿಳಿಸಿದ್ದಾರೆ. ವಿನಯ್ ಬಾಲಾಜಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಹುಲಿರಾಯ ಖ್ಯಾತಿಯ ಅರ್ಜುನ್‍ರಾಮು ಸಂಗೀತ ಸಂಯೋಜನೆ ಮಾಡಿದ್ದಾರೆ.ಮನ್ವರ್ಷಿ, ವಿನಯ್‍ಬಾಲಾಜಿ, ಅವರ ಸಂಭಾಷಣೆ ಬರೆದಿದ್ದಾರೆ. ಮನೋಹರ್‍ಜೋಷಿ ಛಾಯಾಗ್ರಹಣ, ಸತೀಶ್ ಸಂಕಲನ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮದನ್ – ಹರಿಣಿ, ನಾಗೇಶ್ ನೃತ್ಯ ನಿರ್ದೇಶನ ಹಾಗೂ ವಿನೋದ್ ರಾವ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಕವಿರಾಜ್, ಬಹದ್ದೂರ್ ಚೇತನ್, ಕಿರಣ್ ಕಾವೇರಿಯಪ್ಪ ಬರೆದಿದ್ದಾರೆ.

ಕಿಶೋರ್, ಪ್ರಿಯಾಮಣಿ, ಮಯೂರಿ, ಅರ್ಜುನ್ ಯೋಗಿ, ನಿರಂಜನ್ ದೇಶಪಾಂಡೆ, ಗಿರಿಜಾ ಲೋಕೇಶ್, ವೈಷ್ಣವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!