‘ಮೇಲೊಬ್ಬ ಮಾಯಾವಿ’ ಎಪ್ರಿಲ್ 29ರಂದು ಬಿಡುಗಡೆ

ಹರಳು ಮಾಫಿಯಾದ ಅಪರೂಪದ ಕಂಟೆಟ್ ಹೊತ್ತ `ಮೇಲೊಬ್ಬ ಮಾಯಾವಿ’ ಚಿತ್ರ 2022ರ ಎಪ್ರಿಲ್ 29ಕ್ಕೆ ರಿಲೀಸ್ ಆಗಲಿದೆ.

ಈ ಚಿತ್ರದಲ್ಲಿ ಸಂಚಾರಿ ವಿಜಯ್ ಇರುವೆ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರಣ್ಯಪ್ರದೇಶವನ್ನೇ ಹೊದ್ದುಕೊಂಡಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದ ಪುಷ್ಪಗಿರಿ ಅಭಯಾರಣ್ಯ ಭಾಗದಲ್ಲಿ ನಡೆಯುತ್ತಿರುವ ಹರಳು ಕಲ್ಲು ದಂಧೆಯ ಕರಾಳಮುಖವನ್ನು ತಮ್ಮ ಪಾತ್ರದ ಮೂಲಕ ಬಿಚ್ಚಿಡಲಿದ್ದಾರೆ. `ಮೇಲೊಬ್ಬ ಮಾಯಾವಿ’ ಚಿತ್ರದ ಹಾಡುಗಳು ಈಗಾಗಲೇ ರಿಲೀಸ್ ಆಗಿದ್ದು, ಹಾಡುಗಳ ಸಾಹಿತ್ಯ ಮತ್ತು ಸಂಗೀತದಿ0ದ ಪ್ರೇಕ್ಷಕರನ್ನು ತಲುಪುವಲ್ಲಿ ಸಫಲವಾಗಿದೆ.

ಚಿತ್ರದಲ್ಲಿ ರಂಗಭೂಮಿ ಪ್ರತಿಭೆ ಅನನ್ಯ ಶೆಟ್ಟಿ ನಾಯಕಿಯಾಗಿದ್ದು, `ಸಕ್ಕರೆ’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ಬಾಸ್ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ ಮೊಟ್ಟ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಖಳನಟನಾಗಿ ಕಾಣಿಕೊಳ್ಳುತ್ತಿದ್ದಾರೆ. ಕಿರುತೆರೆ ನಟಿ ಪವಿತ್ರಾ ಜಯರಾಮ್, ಚಕ್ರವರ್ತಿ ಚಂದ್ರಚೂಡ್ ಅವರ ಕಾಂಬೀನೇಶನ್ ಸ್ಟಿಲ್ಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

ಉಳಿದಂತೆ ಚಿತ್ರದಲ್ಲಿ ಕೃಷ್ಣಮೂರ್ತಿ ಕವತ್ತಾರ್, ಬೆನಕ ನಂಜಪ್ಪ, ಎಮ್.ಕೆ.ಮಠ, ನವೀನ್ಕುಮಾರ್, ಲಕ್ಷ್ಮಿ ಅರ್ಪಣ್, ಮುಖೇಶ್ ಹಾಗೂ ಡಾ.ಮನೋನ್ಮಣಿ ಹೀಗೆ ಸಾಕಷ್ಟು ರಂಗಭೂಮಿ ಪ್ರತಿಭೆಗಳನ್ನು ಚಿತ್ರದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಕಾಣಬಹುದು.

ಆಭರಣ, ಉಂಗುರುಗಳಿಗೆ ಬಳಸುವ ಈ ಹರಳಿನ ಕಲ್ಲಿಗಾಗಿ ಅಕ್ರಮ ದಂಧೆಕೋರರ ಹುಡುಕಾಟ ಹೇಗಿರುತ್ತದೆ? ಹುಡುಕಾಟದಲ್ಲಿ ಸಂಭವಿಸುವ ಸಾವು-ನೋವುಗಳ ಹಿಂದಿನ ಅಸಲಿ ಸತ್ಯ ಏನು? ಅರಣ್ಯ ಇಲಾಖೆ ಈ ದಂಧೆಯ ವಿಚಾರದಲ್ಲಿ ಸುಮ್ಮನಿರುವುದ್ಯಾಕೆ? ದಶಕಗಳಿಂದ ನಡೆಯುತ್ತಿರುವ ಈ ಹರಳು ಮಾಫಿಯಾದ ಹಿಂದಿರುವ ಪೈಶಾಚಿಕ ಮನಸ್ಥಿಗಳು ಯಾವುವು? ಹರಳು ದಂಧೆ ಇಡೀ ಪರಿಸರವನ್ನು ನಾಶಗೊಳಿಸುವುದರ ಜೊತೆಗೆ, ಇಡೀ ಮನುಕುಲವನ್ನೇ ಹೇಗೆ ವಿನಾಶದ ಅಂಚಿಗೆ ಕೊಂಡತಯ್ಯಬಹುದಾದ ಬಗೆ ಹೇಗೆ? ಇಂತಹ ಸಾಕಷ್ಟು ಪ್ರಶ್ನೆಗಳಿಗೆ `ಮೇಲೊಬ್ಬ ಮಾಯಾವಿ’ ಚಿತ್ರ ಉತ್ತರ ನೀಡಲಿದೆ.

`ನಾನು ಅವನಲ್ಲ ಅವಳು’ ಚಿತ್ರದಲ್ಲಿ ಮನೋಜ್ಞ ಅಭಿನಯ ನೀಡಿದ್ದ ಸಂಚಾರಿ ವಿಜಯ್ ಅವರ ಈ ಚಿತ್ರದಲ್ಲಿನ `ಇರುವೆ’ ಪಾತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವಿದೆ.

ಬಿ.ನವೀನ್ಕೃಷ್ಣ ನಿರ್ದೇಶನ ಮಾಡಿರೋ `ಮೇಲೊಬ್ಬ ಮಾಯಾವಿ’ ಸಿನಿಮಾವನ್ನು, `ಶ್ರೀ ಕಟೀಲ್ ಸಿನಿಮಾಸ್’ ಬ್ಯಾನರ್ನ ಅಡಿಯಲ್ಲಿ ಭರತ್ ಕುಮಾರ್ ಮತ್ತು ತನ್ವಿ ಅಮಿನ್ ಕೊಲ್ಯ ನಿರ್ಮಾಣ ಮಾಡಿದ್ದಾರೆ.


Be the first to comment

Leave a Reply

Your email address will not be published. Required fields are marked *

Translate »
error: Content is protected !!