‘ಎಡಗೈಯೇ ಅಪಘಾತಕ್ಕೆ ಕಾರಣ’ದಲ್ಲಿ ನಿರೂಪ್ ಭಂಡಾರಿ ಸ್ಪೆಷಲ್ ರೋಲ್

‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿದ್ದಾರೆ.

ಸಮರ್ಥ್ ಬಿ ಕಡಕೋಳ್ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ. ಎಡಗೈಯೇ ಅಪಘಾತಕ್ಕೆ ಕಾರಣ ಶೂಟಿಂಗ್ ಮಂಗಳವಾರ ಮುಕ್ತಾಯಗೊಂಡಿದೆ. ದಿಗಂತ್ ನಾಯಕನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಿರ್ದೇಶಕರಿಂದ ನಿರ್ಮಾಪಕರಾಗಿ ಬದಲಾಗಿರುವ ಗುರುದತ್ತ ಗಾಣಿಗ ಅವರು ನಿರೂಪ್ ಅವರ ಪಾತ್ರವು ವಿಶಿಷ್ಟವಾಗಿದೆ. ಇದು ಚಿತ್ರದ ಕಥಾಹಂದರದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ನಾವು ನಿರ್ದಿಷ್ಟವಾಗಿ ಈ ಪಾತ್ರಕ್ಕಾಗಿ ನಿರೂಪ್ ಭಂಡಾರಿ ಅವರನ್ನು ಆಯ್ಕೆ ಮಾಡಿದ್ದೇವೆ. ಅವರು ಆಫರ್ ಒಪ್ಪಿಕೊಂಡಿದ್ದಕ್ಕಾಗಿ ನಮಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರ ಕ್ರೈಮ್ ಥ್ರಿಲ್ಲರ್ ಆಧಾರಿತ ಸಿನಿಮಾವಾಗಿದೆ. ಎಡಗೈ ವ್ಯಕ್ತಿಗಳು ಮತ್ತು ಅವರು ಎದುರಿಸುವ ಸವಾಲುಗಳ ಸುತ್ತ ಚಿತ್ರ ಕೇಂದ್ರೀಕೃತವಾಗಿದೆ.

ಚಿತ್ರದಲ್ಲಿ ಧನು ಹರ್ಷ ಅವರನ್ನು ನಾಯಕಿಯಾಗಿ ಪರಿಚಯಿಸಲಾಗಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ, ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣವಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!