ಚಿಕ್ಕಣ್ಣಗೂ ನೋಟಿಸ್?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಹೊಸ ಹೆಸರುಗಳು ಕೇಳಿ ಬರುತ್ತಿವೆ.  ಈಗ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್​​ ಶೆಡ್​ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್​ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್​ಗೆ ಪಾರ್ಟಿ ಮುಗಿಸಿ ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್​ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಜೂನ್ 17 ರ ಸಂಜೆ ನೋಟಿಸ್ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸೇರಿ 19 ಮಂದಿ ಬಂಧನ ಆಗಿದೆ. ಈ ಕೇಸ್​ನಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನೂ ಅರೆಸ್ಟ್ ಮಾಡಲಾಗುತ್ತಿದೆ. ದರ್ಶನ್  ಇನ್ನೂ ಹಲವು ದಿನ ಜೈಲಿನಲ್ಲೇ ಕಳೆಯಬೇಕಾದ  ಸ್ಥಿತಿ ಬಂದೊದಗಿದೆ.

ದರ್ಶನ್ ಹಾಗೂ ಚಿಕ್ಕಣ್ಣ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ.  ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆದಾಗ ದರ್ಶನ್ ಅವರು ಸಿನಿಮಾ ನೋಡಿ ಚಿಕ್ಕಣ್ಣಗೆ ಬೆಂಬಲ ನೀಡಿದ್ದರು. ದರ್ಶನ್ ಅವರ ಅನೇಕ ಪಾರ್ಟಿಗಳಲ್ಲಿ ಚಿಕ್ಕಣ್ಣ ಭಾಗಿ ಆಗಿದ್ದರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!