ಪುನೀತ್ ಪ್ರತಿಮೆ ನಿರ್ಮಾಣಕ್ಕೆ ಬಿಬಿಎಂಪಿ ನೌಕರರ ಆಗ್ರಹ

ಬಿಬಿಎಂಪಿ ನೌಕರರು ನಟ ಪುನೀತ್ ರಾಜ್ ಕುಮಾರ್ ಪ್ರತಿಮೆ ನಿರ್ಮಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪುನೀತ್ ರಾಜ್‌ಕುಮಾರ್ ಪ್ರತಿಮೆ ಸಿರ್ಮಿಸುವಂತೆ ಬಿಬಿಎಂಪಿ ನೌಕರರು ಬೇಡಿಕೆ ಇಟ್ಟಿದ್ದು, ಈ ತಿಂಗಳಲ್ಲೇ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಡಾ. ರಾಜ್ ಪ್ರತಿಮೆಯ ಪಕ್ಕ ಪುನೀತ್ ಅವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಬೇಕು. ಬಿಬಿಎಂಪಿ ಆಯುಕ್ತರು ಇದಕ್ಕೆ ಅವಕಾಶ ಕಲ್ಪಿಸಿಕೊಟ್ಟರೆ ಸ್ವಂತ ಖರ್ಚಿನಲ್ಲಿ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಮಾಡುತ್ತೇವೆ ಎಂದು ಸಂಘದ ಅಧ್ಯಕ್ಷ ಅಮೃತ್ ರಾಜ್ ತಿಳಿಸಿದ್ದಾರೆ.

ಬಿಬಿಎಂಪಿ ಆವರಣದಲ್ಲಿ ಡಾ. ರಾಜ್‌ ಪ್ರತಿಮೆ ಬಳಿ ಪುನೀತ್ ಕಂಚಿನ ಪ್ರತಿಮೆ ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಾನೂನಿನ ಚೌಕಟ್ಟಿನಲ್ಲಿ ಪ್ರತಿಮೆ ನಿರ್ಮಾಣಕ್ಕೆ ತಯಾರಿ ನಡೆಸುವ ಬಗ್ಗೆ ಪರೀಶೀಲನೆ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಭರವಸೆ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪುನೀತ್ ರಾಜ್‌ಕುಮಾರ್ ಅವರಿಗೆ ಪದ್ಮಶ್ರೀ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಈಗ ಬಿಬಿಎಂಪಿ ನೌಕರರ ಸಂಘ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಅವಕಾಶ ಕೋರಿದ್ದು, ಬಿಬಿಎಂಪಿ ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಹೊಂದಿದ್ದಾರೆ.

ಬಿಬಿಎಂಪಿ ಪ್ರತಿಮೆ ಸ್ಥಾಪನೆಗೆ ಗ್ರೀನ್ ಸಿಗ್ನಲ್‌ ನೀಡಿದಲ್ಲಿ ಒಂದು ತಿಂಗಳಿನಲ್ಲಿ ಪುನೀತ್ ಪ್ರತಿಮೆ ಸ್ಥಾಪನೆ ಆಗುವ ಸಾಧ್ಯತೆ ಇದೆ.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!