chetanchandra: ಚುನಾವಣಾ ಕಾವಿನ ಮಧ್ಯೆ ಪ್ರಭುತ್ವ ತೆರೆಗೆ

ಮತದಾನದ ಮಹತ್ವವನ್ನು ತಿಳಿಸಲು ಚೇತನ್ ಚಂದ್ರ ಅಭಿನಯದ ‘ಪ್ರಭುತ್ವ’ ಚಿತ್ರ ತೆರೆಗೆ ಬರುತ್ತಿದೆ.

ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಚಿತ್ರತಂಡ, ಚಿತ್ರ ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ರಂಗನಾಥ್ ನಿರ್ದೇಶನದ ಈ ಚಿತ್ರ ಮತದಾನದ ಮಹತ್ವವನ್ನು ತಿಳಿಸುತ್ತದೆ. ಈಗಾಗಲೇ ಚಿತ್ರದ ಟ್ರೈಲರ್ ಮೂಲಕ ಹೊರತರಲಾಗಿದೆ.

ರವಿರಾಜ್ ಎಸ್ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಅವರ ತಂದೆ ಡಾ ಶಿವಕುಮಾರ್ ಕಥೆ ಬರೆದಿದ್ದಾರೆ.

ಗೌಳಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಪವನಗೌಡ ಅವರಿಗೆ ಚಿತ್ರದಲ್ಲಿ ಮತ್ತೊಂದು ವಿಶಿಷ್ಟ ಪಾತ್ರವಿದೆ. ಅರವಿಂದ್ ರಾವ್, ಹರೀಶ್ ರಾಯ್, ಆದಿ ಲೋಕೇಶ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ವಿಜಯ್ ಚೆಂಡೂರ್, ವೀಣಾ ಸುಂದರ್ ಮತ್ತು ಅನಿತಾ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ. ನಿರ್ಮಾಪಕರು ಚುನಾವಣೆಗೂ ಮೊದಲು ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!