‘ಪ್ರಕರಣ ತನಿಖಾ ಹಂತದಲ್ಲಿದೆ’ ಅ.18ಕ್ಕೆ ಬಿಡುಗಡೆ

ಶೀರ್ಷಿಕೆ ಮೂಲಕ  ಗಮನ ಸೆಳೆದಿರುವ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಆಕ್ಟೋಬರ್ 18ಕ್ಕೆ ಬಿಡುಗಡೆಯಾಗುತ್ತಿದೆ.

ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಸಂದರ್ಭ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.

ಚಿತ್ರಕ್ಕೆ ಚಿಂತನ್ ಕಂಬಣ್ಣ ಬಂಡವಾಳ ಹೂಡಿದ್ದಾರೆ. ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಚಿತ್ರ ನಿರ್ಮಾಣ ಮಾಡಿರುವ ಚಿಂತನ್ ಅವರು ಸಿನಿಮಾದಲ್ಲಿ ಒಂದು ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.  ಮಹೀನ್‌ ಕುಬೇರ್‌, ಮುತ್ತುರಾಜ್‌ ಟಿ, ಗಗನ್‌ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಚಿತ್ರ ಕುರಿತು ಮಾತನಾಡಿರುವ ನಿರ್ಮಾಪಕ ಚಿಂತನ್ ಕಂಬಣ್ಣ, ‘ ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್ ಗಳಿದೆ. ನೈಜ ಜೀವನ ಕಥೆಗೆ ಚಿತ್ರಕಥೆ ಹೊಂದಿಕೆಯಾಗುವಂತಿದೆ. ನಮ್ಮ ತಂಡ ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದು, ಆಧುನಿಕ ಯುಗದ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಕಥೆ ಹೆಣೆಯಲಾಗಿದೆ’ ಎಂದು ಹೇಳಿದ್ದಾರೆ.

‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರಕ್ಕೆ ವಿ.ಎಫ್.ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ಹೊತ್ತಿದ್ದಾರೆ. ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್ ಛಾಯಾಗ್ರಹಣ, ನಾನಿ ಕೃಷ್ಣ ಸಂಕಲನ, ಶಿವೋಂ ಸಂಗೀತವಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!