pratham: ‘ಪುನೀತ ಮಾಲೆ’ ವಿರುದ್ಧ ಪ್ರಥಮ್ ಆಕ್ರೋಶ

‘ಪುನೀತ ಮಾಲೆ’ ಹಾಕುವವರ ವಿರುದ್ಧ ನಟ ಪ್ರಥಮ್ ಕಿಡಿ ಕಾರಿದ್ದಾರೆ.

ದೇವರು-ದೇವರೇ…ಕಲಾವಿದರು-ಕಲಾವಿದರೇ ಎಂದಿದ್ದಾರೆ ಪ್ರಥಮ್.

“ದೇವರ ಮೇಲೆ ಭಕ್ತಿ ಇರಲಿ! ಕಲಾವಿದರ ಮೇಲೆ ಪ್ರೀತಿ,ಅಭಿಮಾನವಿರಲಿ! ಶಬರಿಮಲೆಗೆ ಹೋಗೋದು ಅಯ್ಯಪ್ಪನಲ್ಲಿ ಶರಣಾಗೋಕೆ! ಬಹಳ ಶಿಸ್ತುಗಳನ್ನ ಪಾಲಿಸಿ ಶ್ರದ್ಧಾಭಕ್ತಿಗಳಿಂದ ಮಾಲೆ ಧಾರಣೆ ಮಾಡಬೇಕು! ಕಲಾವಿದರನ್ನ ಕಲಾವಿದರಾಗಿರೋಕೆ ಬಿಡಿ! ಧಾರ್ಮಿಕ ನಂಬಿಕೆಗಳಲ್ಲಿ ಯಾರೂ ಅತೀರೇಕದ ವರ್ತನೆ ತೋರಬಾರದು!! ದೇವರು, ದೇವರೇ..ಕಲಾವಿದರು-ಕಲಾವಿದರೇ!” ಎಂದು ಟ್ವೀಟ್ ಮಾಡಿದ್ದಾರೆ ಪ್ರಥಮ್.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪ್ಪು ಹುಡುಗರು ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ‘ಅಪ್ಪು ದೇವರ ಮಾಲೆ ವ್ರತ’ ಆಚರಣೆಯನ್ನು ಮಾಡಲಾಗುತ್ತಿದೆ.

ಹೊಸಪೇಟೆಯ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಅಯ್ಯಪ್ಪ ಸ್ವಾಮಿ ಮಾದರಿಯಲ್ಲಿಯೇ ಮಾರ್ಚ್ 1ರಿಂದ 17ರವರೆಗೆ ಪುನೀತ ಮಾಲೆ ಧರಿಸಿ ಪುನೀತ್ ರಾಜ್ ಕುಮಾರ್ ಫೋಟೊ ಇಟ್ಟು ಪೂಜೆ ಸಲ್ಲಿಸಲು ಯೋಜನೆ ಹಾಕಿಕೊಂಡಿದ್ದಾರೆ.

ಜೊತೆಗೆ ರಾಜ್ಯದಲ್ಲಿನ ಅಪ್ಪು ಅಭಿಮಾನಿಗಳು ಈ ರೀತಿ ಮಾಲೆ ಹಾಕಿಕೊಳ್ಳಬಹುದು ಎಂದು ಹಲವು ನಿಯಮಗಳನ್ನೂ ಸಹ ಪ್ರಕಟಿಸಿದ್ದರು. ಈ ಪ್ರಕಟಣೆ ವೈರಲ್ ಆದ ಬೆನ್ನಲ್ಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!