ನಿರ್ಮಾಪಕ ಪುತ್ತೂರು ಭರತ್ ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ನಟ  ಸಂಚಾರಿ ವಿಜಯ್ ಅಭಿನಯದ ‘ಮೇಲೊಬ್ಬ ಮಾಯಾವಿ’ ಸಿನಿಮಾ  ನಿರ್ಮಾಣ ಮಾಡಿ ‘ಪುತ್ತೂರು ಭರತ್’’ಎಂದೇ ಜನಪ್ರಿಯರಾಗಿದ್ದ  ಭರತ್ ಕುಮಾರ್ ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು.

ಪುತ್ತೂರಿನ ಪಡ್ನೂರು ಗ್ರಾಮದ ಮತಾವು ಮನೆಯ ದಿ. ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರ ಭರತ್ 43 ವರ್ಷ ಪ್ರಾಯದವರಾಗಿದ್ದರು. ಬೆಂಗಳೂರಿನಲ್ಲಿ ಸಿವಿಲ್ ಬಿಲ್ಡರ್ ಆಗಿ ಸ್ವಯಂವೃತ್ತಿ ನಿರತರಾಗಿದ್ದರು.

ಭರತ್ ಅವರು ಬೆಂಗಳೂರು ಮತ್ತು ಪುತ್ತೂರು ಕಂಬಳ ಕೂಟಗಳ ಸದಸ್ಯರೂ ಆಗಿದ್ದರು.  ಅವರು ಅಮ್ಮ, ಪತ್ನಿ ರವಿಕಲಾ,  ಮಗ ನಿಹಾರ್ ಮತ್ತು ಮಗಳು ಹಂಸಿಕಾ  ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.  ಸಿನಿಮಾ ರಂಗದಲ್ಲಿ ಇನ್ನಷ್ಟು ಸಾಧಿಸುವ ಕನಸು ಹೊತ್ತಿದ್ದ ಭರತ್ ಚಿಕ್ಕವಯಸ್ಸಿನಲ್ಲಿ ನಿಧನವಾಗಿರುವುದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಕನ್ನಡ ಚಿತ್ರರಂಗದ ಹಲವರು ಹಾಗೂ ಅಭಿಮಾನಿಗಳು ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾ  ನಿರ್ಮಾಣ ಮಾಡಿದ ಭರತ್  ಅವರ ನಿಧನಕ್ಕೆ ಕಂಬನಿ ನಡೆದಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!