ವರಮಹಾಲಕ್ಷ್ಮೀಹಬ್ಬದಂದು ‘ಪ್ರೋಡಕ್ಷನ್ ನಂ 6’ ಚಿತ್ರಕ್ಕೆ ಚಾಲನೆ.

ಲಕ್ಷ್ಮೀವೆಂಕಟೇಶ್ವರ ಕಂಬೈನ್ಸ್ ಲಾಂಛನದಲ್ಲಿ ಬಿ.ಎಸ್.ಸುಧೀಂದ್ರ ಅವರು ನಿರ್ಮಾಣ ಮಾಡುತ್ತಿರುವ ಪ್ರೋಡಕ್ಷನ್ ನಂ 6′ ನೂತನ ಚಿತ್ರದ ಮುಹೂರ್ತ ಸಮಾರಂಭ ವರಮಹಾಲಕ್ಷ್ಮೀ ಹಬ್ಬದ ಶುಭದಿನದಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ‘ಕಿಲ್ಲಿಂಗ್ ವೀರಪ್ಪನ್’ ಚಿತ್ರದ ನಂತರ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರಘು ಕೋವಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡುತ್ತಿದ್ದಾರೆ. ಶಶಾಂಕ್ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಇವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ಪಾರ್ವತಮ್ಮ ರಾಜಕುಮಾರ್ ಅವರ ಸಹೋದರ ಎಸ್.ಎ.ಶ್ರೀನಿವಾಸ್ ಅವರ ಪುತ್ರ ಸೂರಜ್‍ಕುಮಾರ್ ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ನೀನಾಸಂನಲ್ಲಿ ತರಬೇತಿ ಪಡೆದಿರುವ ಸೂರಜ್ ಕುಮಾರ್ ಅವರು ‘ತಾಕತ್’ ಹಾಗೂ ‘ಐರಾವತ’ ಚಿತ್ರಗಳಿಗೆ ಸಹಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಈಗ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸೂರಜ್ ಅವರನ್ನು ನಾಯಕರಾಗಿ ಆಯ್ಕೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೇಳಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಸೂರಜ್ ಕುಮಾರ್ ಅವರಿಗೆ ನಾಯಕಿಯಾಗಿ ಪ್ರಿಯ ವಾರಿಯರ್ ನಟಿಸುತ್ತಿದ್ದಾರೆ.

ಪ್ರೇಮಕಥೆಯುಳ್ಳ ಈ ಚಿತ್ರದಲ್ಲಿ 5 ಹಾಡುಗಳು ಹಾಗೂ 3 ಸಾಹಸ ಸನ್ನಿವೇಶಗಳಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ದೀಪು ಎಸ್ ಕುಮಾರ್ ಸಂಕಲನ, ಇಮ್ರಾನ್ ನೃತ್ಯ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ನೂತನ ಚಿತ್ರಕ್ಕಿದೆ. ಬೆಂಗಳೂರು, ಕಾಶಿ, ಹೈದರಾಬಾದ್ ಮುಂತಾದ ಕಡೆ ಚಿತ್ರಕ್ಕೆ 60 ದಿನಗಳ ಚಿತ್ರೀಕರಣ ನಡೆಯಲಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!