ಪುನೀತ್ ಕನಸಿನ ಸಾಕಾರಕ್ಕೆ ಅಶ್ವಿನಿ ಹೆಜ್ಜೆ

ನಟ ಪುನೀತ್ ರಾಜ್ ಕುಮಾರ್ ಅವರ ಕನಸಾದ ‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿಯ ಬಿಡುಗಡೆಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮುಂದಾಗಿದ್ದು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

“ಅಪ್ಪು ಅವರ ಕನಸೊಂದು 11- 11- 2021ರಂದು ಬೆಳಕು ಕಾಣಬೇಕಿತ್ತು. ಆದರೆ ಈ ಕನಸಿಗಿದು ಅಲ್ಪವಿರಾಮವಷ್ಟೇ. ಅದನ್ನು ಅವರಿಷ್ಟದಂತೆ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯ ತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ” ಎಂದು ಟ್ವೀಟ್ ಮಾಡಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು ಅಮೋಘ ವರ್ಷ ಅವರ ಜೊತೆ ಸೇರಿ ‘ವೈಲ್ಡ್​ ಕರ್ನಾಟಕ’ ಎಂಬ ಡಾಕ್ಯುಮೆಂಟರಿ ಸಿದ್ದಪಡಿಸಿದ್ದರು. ಅದಕ್ಕೆ ಗಂಧದ ಗುಡಿ ಎಂದು ಹೆಸರನ್ನು ಕೂಡ ಇಟ್ಟಿದ್ದರು.​ ಇದನ್ನು ರಾಜ್ಯದ ಹಲವು ಸ್ಥಳಗಳಲ್ಲಿ ಶೂಟ್ ಮಾಡಲಾಗಿತ್ತು. ಇದರಲ್ಲಿ ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ.
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಾಕ್ಯುಮೆಂಟರಿಯ ಟೀಸರ್ ಬಿಡುಗಡೆ ಮಾಡಬೇಕಿತ್ತು.

ಪವರ್ ಸ್ಟಾರ್ ಪುನೀತ್​ ರಾಜ್​ಕಕುಮಾರ್ ಅಕ್ಟೋಬರ್ 29ರಂದು ಹೃದಯಾಘಾತದಿಂದ ನಿಧನರಾದರು. ಈ ಮುನ್ನ ಅವರು, ” ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ. ನವೆಂಬರ್​ 1ಕ್ಕಾಗಿ ಕಾಯಿರಿ’ ಎಂದು ಪೋಸ್ಟ್ ಮಾಡಿದ್ದರು.

ಈಗ ‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಬಿಡುಗಡೆ ಬಗ್ಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಇದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
___

 

Be the first to comment

Leave a Reply

Your email address will not be published. Required fields are marked *

Translate »
error: Content is protected !!