ಪುನೀತ್ ನಟಿಸಬೇಕಿದ್ದ ಚಿತ್ರಕ್ಕೆ ವಿರಾಟ್ ನಾಯಕ

ಪುನೀತ್ ರಾಜ್ ಕುಮಾರ್ ಅವರಿಗೆ ಆಕ್ಷನ್ ಕಟ್ ಹೇಳಲು ಕಥೆ ರಚಿಸಿದ್ದ ದಿನಕರ್ ತೂಗುದೀಪ ಆ ಕಥೆಗೆ ಬೇರೆ ನಾಯಕರನ್ನು ಆಯ್ಕೆ ಮಾಡಿಕೊಂಡಿದ್ದು, ಈ ಸಿನಿಮಾಗೆ ವಿರಾಟ್ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನಟ ಪವರ್‌ ಸ್ಟಾರ್ ಪುನೀತ್‌ ರಾಜ್‌ಕುಮಾರ್ ನಿಧನಕ್ಕೂ ಮುನ್ನ ಸಾಕಷ್ಟು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಅದರೆ ಅವರ ನಿಧನದ ಬಳಿಕ ಚಿತ್ರತಂಡಗಳು ಅನಿವಾರ್ಯವಾಗಿ ಬೇರೆ ಮಾರ್ಗ ಹುಡುಕುವ ಅನಿವಾರ್ಯತೆಗೆ ಸಿಲುಕಿವೆ. ಈಗ ನಿರ್ದೇಶಕ ದಿನಕರ್ ತೂಗುದೀಪ ಅವರು ಬೇರೆ ಸಿನಿಮಾ ಮಾಡಲು ಮುಂದಾಗಿದ್ದಾರೆ.
ವಿರಾಟ್ ಅವರ ಹುಟ್ಟುಹಬ್ಬದಂದು ಸಿನಿಮಾ ಪೋಸ್ಟರ್‌ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇದು ವಿರಾಟ್ ಅವರ 3ನೇ ಸಿನಿಮಾ ಆಗಿದೆ. ಮೂರನೇ ಚಿತ್ರಕ್ಕೆ ಇಷ್ಟು ದೊಡ್ಡ ಪ್ರಾಜೆಕ್ಟ್ ಸಿಕ್ಕಿರುವುದಕ್ಕೆ ವಿರಾಟ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಿನಿಮಾವನ್ನು ಜಯಣ್ಣ-ಭೋಗೇಂದ್ರ ಕಂಬೈನ್ಸ್ ನಿರ್ಮಾಣ ಮಾಡುತ್ತಿದ್ದು, ಇದು ಇವರ 24 ನೇ ಸಿನಿಮಾವಾಗಿದೆ. ಚಿತ್ರತಂಡ ರಿಲೀಸ್ ಮಾಡಿರುವ ಪೋಸ್ಟರ್‌ ನಲ್ಲಿ 24 ಸಂಖ್ಯೆ ಬರೆದಿರುವುದನ್ನು ಕಾಣಬಹುದು.

ಇನ್ನೂ ಟೈಟಲ್ ಇಡದ ಈ ಸಿನಿಮಾ ಶೂಟಿಂಗ್ ಮೇ ತಿಂಗಳಲ್ಲಿ ಆರಂಭವಾಗಲಿದೆ. ಸದ್ಯ ವಿರಾಟ್ ಅದ್ಧೂರಿ ಲವರ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.
ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ಮಾರ್ಚ್ 17ರಂದು ಬಿಡುಗಡೆ ಆಗಲಿದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ನಡೆಯುತ್ತಿವೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!