ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್, ವಿಜಯದಶಮಿಯ ಶುಭ ಸಂದರ್ಭದಲ್ಲಿ ಪಿಎ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ತಮ್ಮ ಮುಂದಿನ ಹೊಸ ಚಿತ್ರ ಘೋಷಿಸಿದ್ದಾರೆ.
ಕೊತ್ತಲವಾಡಿ ನಿರ್ದೇಶಕ ಶ್ರೀರಾಜ್ ಮತ್ತೆ ಹೊಸ ಚಿತ್ರದಲ್ಲಿ ಸಹಯೋಗ ಮಾಡಲಿದ್ದಾರೆ. ಕೊತ್ತಲವಾಡಿ ಚಿತ್ರದ ಹೆಚ್ಚಿನ ತಾಂತ್ರಿಕ ತಂಡವೇ ಹೊಸ ಚಿತ್ರದಲ್ಲಿಯೂ ಕೆಲಸ ಮಾಡಲಿದೆ. ಶೀಘ್ರದಲ್ಲೇ ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಚಿತ್ರತಂಡ ಯೋಜಿಸಿದೆ.
ಈ ಹಿಂದೆ ಪುಷ್ಪಾ ಅರುಣ್ ಕುಮಾರ್, ‘ಗುರು ಶಿಷ್ಯರು’ ಖ್ಯಾತಿಯ ನಟ ಶರಣ್ ಅವರೊಂದಿಗೆ ಚಿತ್ರ ಮಾಡುವುದಾಗಿ ಹೇಳಿದ್ದರು. ಹೊಸ ಚಿತ್ರವು ಅವರೊಂದಿಗೆ ಇರುತ್ತದೆಯೇ ಅಥವಾ ಬೇರೆ ಚಿತ್ರವೇ ಎಂಬುದು ಸ್ಪಷ್ಟವಾಗಿಲ್ಲ.
ಗಲ್ಲಾಪೆಟ್ಟಿಗೆಯಲ್ಲಿ ಸರಾಸರಿ ಗಳಿಕೆ ಕಂಡಿದ್ದ ಪೃಥ್ವಿ ಅಂಬಾರ್ ಮತ್ತು ಕಾವ್ಯಾ ಶೈವ ಅಭಿನಯದ ‘ಕೊತ್ತಲವಾಡಿ’ ಇದೀಗ ಡಿಜಿಟಲ್ ವೇದಿಕೆಗಳಲ್ಲಿ ಸ್ಟ್ರೀಮ್ ಆಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್, ಪಿಎ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ‘ಕೊತ್ತಲವಾಡಿ’ ಚಿತ್ರದ ಮೂಲಕ ನಿರ್ಮಾಪಕಿಯಾಗಿ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದರು.
—-





Be the first to comment