”ಭೈರಾದೇವಿ’ ಸೋತರೆ ಚಿತ್ರರಂಗದಿಂದ ದೂರ’ ಎಂದ ರಾಧಿಕಾ

‘ಭೈರಾದೇವಿ’ ಚಿತ್ರ ಪ್ರೇಕ್ಷಕರಿಗೆ ಇಷ್ಟವಾದರೆ ಇನ್ನೊಂದು ಸಿನಿಮಾ ಮಾಡುತ್ತೇನೆ. ಇಷ್ಟ ಆಗಲಿಲ್ಲ ಎಂದರೆ ಚಿತ್ರರಂಗದಿಂದಲೇ ದೂರ ಆಗಿಬಿಡುತ್ತೇನೆ” ಎಂದು ರಾಧಿಕಾ ಕುಮಾರಸ್ವಾಮಿ  ಆಶ್ಚರ್ಯದ ಹೇಳಿಕೆ ನೀಡಿದ್ದಾರೆ.

ರಾಧಿಕಾ ಕುಮಾರಸ್ವಾಮಿ ‘ಭೈರಾದೇವಿ’ ಮೂಲಕ ಬೆಳ್ಳಿತೆರೆ ಮೇಲೆ ಬರಲು ತಯಾರಿ ನಡೆಸಿದ್ದಾರೆ. ಶತಾಯಗತಾಯ ಗೆಲ್ಲಲೇಬೇಕು ಎಂಬ ನಿಟ್ಟಿನಲ್ಲಿ  ಚಿತ್ರದಲ್ಲಿ ಟೈಟಲ್‌ ರೋಲ್‌ ಪ್ಲೇ ಮಾಡಿರುವ ರಾಧಿಕಾ, ಈ ಸಿನಿಮಾದ ನಿರ್ಮಾಣವನ್ನೂ ಮಾಡಿದ್ದಾರೆ. ಅಕ್ಟೋಬರ್‌ 3ರಂದು ಈ ಸಿನಿಮಾ ತೆರೆಗೆ ಬರಲಿದೆ.

ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದ  ವೇಳೆ ರಾಧಿಕಾ ಕುಮಾರಸ್ವಾಮಿ, ಸಿನಿಮಾ ಜರ್ನಿಯನ್ನು ಮೆಲುಕು ಹಾಕಿದರು. ಸಿನಿಮಾ ನಿರ್ಮಾಣದ ಹಿಂದಿನ ಸಮಸ್ಯೆಗಳನ್ನೂ ಬಿಚ್ಚಿಟ್ಟರು.

ಭೈರಾದೃವಿ

“ನಿರ್ದೇಶಕ ಶ್ರೀಜೈ ನಮ್ಮ ಮನೆಗೆ ಬಂದು ಕಥೆ ಹೇಳಿದರು‌. ಕಥೆ ಇಷ್ಟವಾಗಿ  ನಿರ್ಮಾಣಕ್ಕೆ ಹಾಗೂ ನಟಿಸಲು ಒಪ್ಪಿಕೊಂಡೆ. ಈ ಚಿತ್ರದ ಆರಂಭವಾದಾಗಿನಿಂದ ಬಿಡುಗಡೆಯವರೆಗೂ ಸಾಕಷ್ಟು ಅಡೆತಡೆಗಳಾಗಿವೆ. ಹಾಗಾಗಿ ನಾನು ಚಿತ್ರದ ಬಿಡುಗಡೆ ಯೋಚನೆಯನ್ನೇ ಮಾಡಿರಲಿಲ್ಲ‌. ಕಳೆದ ಒಂದು ತಿಂಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ಸಿಕ್ಕ ದಂಪತಿ ಹೇಳಿದ ಮಾತೊಂದರ ಸ್ಪೂರ್ತಿಯಿಂದ ಈ ಚಿತ್ರವನ್ನು ಒಂದು ತಿಂಗಳೊಳಗೆ ಬಿಡುಗಡೆ ಮಾಡೋಣ ಎಂದು ನನ್ನ ಅಣ್ಣನಿಗೆ ಹೇಳಿದೆ.   ಭೈರಾದೇವಿ ಚಿತ್ರ ಪ್ರೇಕ್ಷಕರಿಗೆ  ಇಷ್ಟ ಆಗಲಿಲ್ಲ ಎಂದರೆ ಚಿತ್ರರಂಗದಿಂದಲೇ ದೂರ ಆಗಿಬಿಡುತ್ತೇನೆ. ಇದು ದೊಡ್ಡ ಯಶಸ್ಸಾಗುತ್ತದೆ ಎಂಬ ನಂಬಿಕೆ ನನಗಿದೆ” ಎಂದರು.

ನಿರ್ದೇಶಕ ಶ್ರೀಜೈ ‘ಈ ಚಿತ್ರ ಇಷ್ಟು ಅದ್ದೂರಿಯಾಗಿ ಬರಲು ಕಾರಣ ನಮ್ಮ‌ ನಿರ್ಮಾಪಕರು‌. ಮೊದಲು ಅವರಿಗೆ ಧನ್ಯವಾದ ಹೇಳುತ್ತೇನೆ. ಇನ್ನು, ಕಲಾವಿದರಿಗೆ ನಾನು ಬಹಳ ತೊಂದರೆ ಕೊಟ್ಟಿದ್ದೇನೆ. ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ಅನು ಪ್ರಭಾಕರ್, ರವಿಶಂಕರ್, ರಂಗಾಯಣ ರಘು ಹೀಗೆ ಎಲ್ಲಾ ಕಲಾವಿದರು ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ. ತಂತ್ರಜ್ಞರ ಕಾರ್ಯವೈಖರಿಯೂ‌ ಅದ್ಭುತವಾಗಿದೆ’ ಎಂದು ತಿಳಿಸಿದರು.

‘ಈ ಚಿತ್ರದ ಟ್ರೇಲರ್ ನೋಡಿದಾಗ ನನಗೆ ಆಪ್ತಮಿತ್ರ ಚಿತ್ರ ನೆನಪಾಯಿತು. ರಾಧಿಕಾ ಕುಮಾರಸ್ವಾಮಿ ನಿರ್ಮಾಪಕಿ ಹಾಗೂ ನಾಯಕಿಯಾಗಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಳಿ ಪಾತ್ರದಲ್ಲಂತೂ ಅವರ ಅಭಿನಯ ಮನೋಜ್ಞ. ಅವರು ಆ ಪಾತ್ರದಲ್ಲಿ ಅಭಿನಯಿಸುತ್ತಿದ್ದಾಗ ಅವರೊಂದಿಗೆ ಮಾತನಾಡಲಿಕ್ಕೆ ಭಯವಾಗುತ್ತಿತ್ತು” ಎಂದರು ನಟ ರಮೇಶ್ ಅರವಿಂದ್.

‘ರಾಧಿಕಾ ಕುಮಾರಸ್ವಾಮಿ ಅವರು ಅದ್ದೂರಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಶ್ರೀಜೈ ಅವರ ಕಥೆಯೂ ಬಹಳ ಚೆನ್ನಾಗಿದೆ’ ಎಂದರು ಅನು ಪ್ರಭಾಕರ್.

Be the first to comment

Leave a Reply

Your email address will not be published. Required fields are marked *

Translate »
error: Content is protected !!