ಈ ವಾರ ತೆರೆಗೆ ‘ರಾಜಲಕ್ಷ್ಮೀ’

ಎಸ್.ಕೆ.ಎಂ ಮೂವೀಸ್ ಲಾಂಛನದಲ್ಲಿ ಮೋಹನ್ ಕುಮಾರ್ ಎಸ್.ಕೆ ಅವರು ನಿರ್ಮಿಸಿರುವ ‘ರಾಜಲಕ್ಷ್ಮೀ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶ್ರೀಕಾಂತ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ನಾಗರಾಜಮೂರ್ತಿ ಅವರ ಛಾಯಾಗ್ರಹಣವಿದೆ. ಎ.ಟಿ.ರವೀಶ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಕಾಂತರಾಜ್ ಬರೆದಿದ್ದಾರೆ. ಕಿರಣ್-ಅರ್ಜುನ್ ಸಂಕಲನ, ನವೀನ್ ಕನ್ನಡಿಗ ನೃತ್ಯ ನಿರ್ದೇಶನ, ಸಂಕರ್ ಶಾಸ್ತ್ರಿ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಗಡಿ ಯತೀಶ್ ಸಂಭಾಷಣೆ ಬರೆದಿದ್ದಾರೆ.

ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ, ನವೀನ್ ತೀರ್ಥಹಳ್ಳಿ, ರಶ್ಮಿಗೌಡ, ಚಂದ್ರಪ್ರಭ(ಮಜಾಭಾರತ), ಸ್ಟೈಲ್ ಶಶಿ, ಸೀತಾರಾಂ, ಮುತ್ತುರಾಜ್, ಸದಾನಂದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!