ನಿನ್ನೆಯ ದರ್ಶನ್‌ ಆಗಲು ಅವಕಾಶವಿದೆ ಎಂದ ರಮೇಶ್

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ನಿನ್ನೆಯ ದರ್ಶನ್‌ ಆಗಲು ಅವಕಾಶವಿದೆ ಎಂದು ಖ್ಯಾತ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನನಗೆ ಮೂವರು ದರ್ಶನ್ ಕಾಣುತ್ತಾರೆ. ಓರ್ವ ಅಪಾರ ಮನರಂಜನೆ ಕೊಟ್ಟ, ಸೂಪರ್​ ಹಿಟ್​ ಸಿನಿಮಾಗಳನ್ನು ಕೊಟ್ಟ ಸೂಪರ್ ಸ್ಟಾರ್.  ವೀಕೆಂಡ್‌ ವಿತ್ ರಮೇಶ್‌ನಲ್ಲಿ ಆ ದರ್ಶನ್‌ ನೋಡಿದ್ದೆ. ಇವತ್ತಿನ ದರ್ಶನ್ ಓರ್ವರು.  ಘಟನೆಯಿಂದ ಎಲ್ಲರಿಗೂ ನೋವಾಗಿದೆ. ಒಂದು ದೊಡ್ಡ ತಪ್ಪಾಗಿದೆ. ತಪ್ಪು ಯಾರು ಮಾಡಿದ್ದಾರೋ ಆ ವ್ಯಕ್ತಿಗೆ ಶಿಕ್ಷೆ ಆಗಲೇಬೇಕು. ಕಾನೂನು ಪ್ರಕಾರ ಎಲ್ಲವೂ ನಡೆಯಲಿದೆ. ಹೊರಗೆ ಬಂದ ಬಳಿಕ ಹೊಸ ದರ್ಶನ್ ಅವರನ್ನು ನೋಡುತ್ತೇವೆ​​​‌. ಅದು ಬಹಳ ಇಂಟ್ರೆಸ್ಟಿಂಗ್​ ಆಗಿರಲಿದೆ’ ಎಂದಿದ್ದಾರೆ ರಮೇಶ್‌ ಅರವಿಂದ್‌.

‘ನೋ ಯೂ ಟರ್ನ್ ಅನ್ನೋ ಬೋರ್ಡ್​​ ಇರೋದು ರಸ್ತೆಯಲ್ಲಿ ಮಾತ್ರ. ಬದುಕಲ್ಲಿ ಅಲ್ಲ. ಯಾವಾಗ ಬೇಕಾದ್ರೂ ಯೂ ಟರ್ನ್ ಮಾಡಿ ಗೆಲ್ಲಬಹುದು. ಹಳೆಯ ಸೂಪರ್ ಸ್ಟಾರ್ ದರ್ಶನ್ ಆಗಿ ನೋಡಬೇಕು ಅನ್ನೋದು ನಮ್ಮ ಆಸೆ. ಕಾದು ನೋಡೋಣ’ ಎಂದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!