ಕಮಲ್ ಹಾಸನ್ ಅವರ ಸಿನಿಮಾ ನಿಷೇಧಿಸುವುದು ಸ್ವಲ್ಪ ಅತಿರೇಕ ಅನಿಸುವುದಿಲ್ಲವೇ ಎಂದು ನಟಿ ರಮ್ಯಾ ಅವರು ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯೊಂದನ್ನ ಹಂಚಿಕೊಂಡಿರುವ ರಮ್ಯಾ ಅವರು, ‘ಕಮಲ್ ಹಾಸನ್ ಅವರು ಅನುಚಿತವಾಗಿ ಮಾತನಾಡಿರೋದು ನಿಜವೇ. ಹಾಗಂದ ಮಾತ್ರಕ್ಕೆ ಅವರ ಸಿನಿಮಾ ನಿಷೇಧಿಸುವುದು ಸ್ವಲ್ಪ ಅತಿರೇಕ ಅನಿಸುವುದಿಲ್ಲವೇ? ನಾವೆಲ್ಲ ಒಟ್ಟಾಗಿ ಹಿಂದಿ ಹೇರಿಕೆ ವಿರುದ್ಧ ಹೋರಾಡಬೇಕು. ಅದಕ್ಕೂ ಮುನ್ನ ಪರಸ್ಪರರಿಗೆ ಗೌರವ ಕೊಡುವುದನ್ನು ಕಲಿಯಬೇಕು’ ಎಂದು ಹೇಳಿದ್ದಾರೆ.
ದ್ರಾವಿಡ ಭಾಷೆಗಳ ಚಾರ್ಟ್ ಪೋಸ್ಟ್ ಮಾಡಿರುವ ಅವರು, ‘ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಎಲ್ಲವೂ ದ್ರಾವಿಡ ಭಾಷೆಗಳ ಒಂದೇ ಕೊಂಡಿಯಡಿಯಲ್ಲಿ ಬರುತ್ತವೆ. ಆದರೆ, ನಮ್ಮಲ್ಲಿನ ಕೆಲವು ಸಾಮಾನ್ಯತೆ ಮತ್ತು ಹಂಚಿಕೆಯಾಗಿರುವ ಭಾಷಾ ವಂಶಾವಳಿ ಬೇರೆ ಇರಬಹುದು. ಸಂಸ್ಕೃತ ಎಲ್ಲಾ ಭಾಷೆಗಳ ತಾಯಿ ಎಂದು ಭಾವಿಸುವವರಿಗೆ ನೀವು ಕೂಡ ತಪ್ಪಾಗಿ ಕಾಣಿಸಿಸುತ್ತಿದ್ದೀರಿ. ಏಕೆಂದರೆ ಸಂಸ್ಕೃತ ಇಂಡೋ – ಆರ್ಯನ್ ಭಾಷೆ. ನಾವು ದ್ರಾವೀಡರು. ಎರಡೂ ಪರಸ್ಪರ ಭಿನ್ನ’ ಎಂದು ತಿಳಿಸಿದ್ದಾರೆ.
ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ಕಮಲ್ ಹಾಸನ್ ಅವರು ಕನ್ನಡಿಗರ ಕ್ಷಮೆಯಾಚಿಸದಿದ್ದಲ್ಲಿ ಅವರು ನಟಿಸುವ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿಷೇಧ ಹೇರಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.
—-

Be the first to comment