ಅನೂಪ್ ಭಂಡಾರಿ ನಿರ್ದೇಶನದ ‘ರಂಗಿತರಂಗ’ ಚಿತ್ರ ಜುಲೈ 4ರಂದು ಮತ್ತೆ ದೊಡ್ಡ ಪರದೆ ಮೇಲೆ ಬರಲಿದೆ.
‘ರಂಗಿತರಂಗ’ ಸಿನಿಮಾಗೆ ಈಗ ರಿಲೀಸ್ ಆಗಿ ದಶಕದ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ಅನೂಪ್ ಭಂಡಾರಿ ಅವರು ಈ ಚಿತ್ರವನ್ನು ಮತ್ತೆ ರೀ-ರಿಲೀಸ್ ಮಾಡಲು ನಿರ್ಧರಿಸಿದ್ದಾರೆ.
‘ರಂಗಿತರಂಗ’ ಚಿತ್ರ ರಿಲೀಸ್ ಆಗಿದ್ದು 2015ರ ಜುಲೈ 3ರಂದು. ಅನೂಪ್ ಭಂಡಾರಿ ಅವರು ಈ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದರು. ರಿಲೀಸ್ ಆಗಿ 10 ವರ್ಷ ತುಂಬಿದ ವಿಶೇಷ ಸಂದರ್ಭದಲ್ಲಿ ಅನೂಪ್ ಭಂಡಾರಿ ಈ ಚಿತ್ರವನ್ನು ಮತ್ತೆ ರೀ-ರಿಲೀಸ್ ಮಾಡಲು ನಿರ್ಧರಿಸಿದ್ದಾರೆ.
‘10 ವರ್ಷ ತುಂಬಿದ ಖುಷಿಯಲ್ಲಿ ರಂಗಿತರಂಗ ಸಿನಿಮಾ ಜುಲೈ 4ರಂದು ಮತ್ತೆ ರಿಲೀಸ್ ಆಗುತ್ತಿದೆ. ಯಾರು ಈ ಚಿತ್ರವನ್ನು ಇನ್ನೂ ವೀಕ್ಷಿಸಿಲ್ಲವೋ ಅಥವಾ ಮತ್ತೊಮ್ಮೆ ಈ ಚಿತ್ರವನ್ನು ನೋಡಬೇಕು ಎಂದು ಯಾರು ಬಯಸಿದ್ದೀರೋ ಅವರು ವೀಕ್ಷಿಸಬಹುದು. ನಮ್ಮ ಚಿತ್ರಕ್ಕೆ ಐತಿಹಾಸಿಕ ಗೆಲುವನ್ನು ತಂದುಕೊಟ್ಟ ಪ್ರತಿಯೊಬ್ಬರಿಗೂ ಮತ್ತೊಮ್ಮೆ ಧನ್ಯವಾದಗಳು. ಥಿಯೇಟರ್ನಲ್ಲಿ ಸಿಗೋಣ’ ಎಂದು ಅನೂಪ್ ಭಂಡಾರಿ ಬರೆದುಕೊಂಡಿದ್ದಾರೆ.
‘ರಂಗಿತರಂಗ’ ಸಿನಿಮಾದ ಕಥೆ ಕರಾವಳಿಯಲ್ಲಿ ಸಾಗುತ್ತದೆ. ಅಲ್ಲಿನ ದೈವದ ವಿಚಾರವನ್ನು ಇದರಲ್ಲಿ ಹೇಳಲಾಗಿದೆ. ಸಿನಿಮಾದಲ್ಲಿ ನಿರೂಫ್ ಭಂಡಾರಿ, ರಾಧಿಕಾ ಚೇತನ್, ಅವಂತಿಕಾ ಶೆಟ್ಟಿ, ಸಾಯಿಕುಮಾರ್ ನಟಿಸಿದ್ದಾರೆ. ಈ ಚಿತ್ರ ‘ಗುಡ್ಡದ ಭೂತ’ ಧಾರಾವಾಹಿಯನ್ನಾಧರಿಸಿದೆ.
ಅನೂಪ್ ಭಂಡಾರಿ ಸಂಗೀತ ಸಂಯೋಜನೆ, ಅಜನೀಶ್ ಲೋಕನಾಥ್ ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. 1.5 ಕೋಟಿ ರೂಪಾಯಿ ಬಜೆಟ್ನಲ್ಲಿ ಸಿದ್ಧವಾದ ಚಿತ್ರ 43 ಕೋಟಿ ರೂ. ಕಲೆಕ್ಷನ್ ಮಾಡಿತ್ತು.

—-





Be the first to comment