ರಶ್ಮಿಕಾ

ರಶ್ಮಿಕಾ ಹೇಳಿಕೆಗೆ ನೆಟ್ಟಿಜನ್ಸ್ ಆಕ್ರೋಶ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹೇಳಿಕೆ ಚರ್ಚೆಗೆ ಕಾರಣವಾಗಿದ್ದು, ಇದನ್ನು ಅನೇಕ ನೆಟ್ಟಿಜನ್ಸ್  ಟ್ರೋಲ್ ಮಾಡುತ್ತಿದ್ದಾರೆ.

ರಶ್ಮಿಕಾ ಅವರು ‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಈಗ ರಶ್ಮಿಕಾ ಅವರನ್ನು ಟ್ರೋಲ್ ಮಾಡಲು ಹೊಸ ಕಾರಣ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ‘ಛಾವಾ’ ಚಿತ್ರದ ಈವೆಂಟ್ ಮುಂಬೈನಲ್ಲಿ ನಡೆದಿತ್ತು. ಅಲ್ಲಿ ರಶ್ಮಿಕಾ ಅವರು ‘ನಾನು ಹೈದರಾಬಾದ್​ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಸಿನಿಮಾದಲ್ಲಿ ವಿಕ್ಕಿ ಕೌಶಲ್ ಜೊತೆ ನಟಿಸಿದ್ದಾರೆ.

ಕನ್ನಡಿಗರು ರಶ್ಮಿಕಾ ಬಗ್ಗೆ ಟೀಕೆ ಹೊರಹಾಕಿದ್ದಾರೆ. ರಶ್ಮಿಕಾಗೆ ಕರ್ನಾಟಕ ಸಂಪೂರ್ಣವಾಗಿ ಮರೆತು ಹೋಗಿದೆ ಎಂದು ಅನೇಕರು ಹೇಳಿದ್ದಾರೆ. ಕೂರ್ಗ್ ನವರಾದ ನೀವು ನಿಮ್ಮ ಮೂಲ ಮರೆತಿದ್ದೀರಿ. ನಿಮಗೆ ಗೌರವ ಪಡೆದು ಕೊಳ್ಳುವ ಅರ್ಹತೆಯಿಲ್ಲ, ನಿಮಗೆ ನೈತಿಕತೆಯಿಲ್ಲ, ನಾಚಿಕೆಯಾಗಬೇಕು ಎಂದು ನೆಟಿಜನ್ಸ್  ಕಮೆಂಟ್ ಮಾಡಿದ್ದಾರೆ.

‘ಪ್ರೀತಿಗಾಗಿ ಊರನ್ನೇ ಮರೆತ ರಶ್ಮಿಕಾ’ ಎಂದು ಕೆಲವರು ಹೇಳಿದ್ದಾರೆ. ರಶ್ಮಿಕಾ ಯಾವಾಗ ಹೈದರಾಬಾದ್​ನವರಾದರು? ಇದನ್ನು ಜನನ ಪ್ರಮಾಣಪತ್ರದಲ್ಲಿ ಸೇರಿಸಿದ್ದಾರಾ’ ಎಂದು ಕೆಲವರು ಕೇಳಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!