‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಬಿಡುಗಡೆಗೆ ತಯಾರಿ

‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಚಿತ್ರ ಬಿಡುಗಡೆಗೆ ಚಿತ್ರತಂಡ ಸಜ್ಜಾಗುತ್ತಿದೆ.

ಚಿತ್ರಕ್ಕೆ ಯುವ ಪ್ರತಿಭೆ ರಂಗಾ ಅವರು ಆಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದೆ. ಚಿತ್ರದಲ್ಲಿ ನಿಧಿ ಹೆಗಡೆ ಮತ್ತು ಅರುಣ್ ಸೂರ್ಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರ ಬಿಡುಗಡೆಗೆ  ಸಜ್ಜಾಗುತ್ತಿದ್ದು, ಪ್ರಮೋಷನ್ ಕಾರ್ಯದಲ್ಲಿ ಚಿತ್ರತಂಡ ಬಿಝಿಯಾಗಿದೆ.

ಚಿತ್ರ ಸಾಮಾಜಿಕ ವಿಡಂಬನಾತ್ಮಕ ನಾಟಕವನ್ನು ಹೊಂದಿದ್ದು, ಗದ್ದಲದ ನಗರದಲ್ಲಿ ಮಧ್ಯಮ ವರ್ಗದ ಜೀವನ  ಮತ್ತು ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆ  ಚಿತ್ರದ ತಿರುಳಾಗಿದೆ.

ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ಚಿತ್ರ ನಿರ್ಮಾಣವಾಗಿದೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪಕರಾಗಿದ್ದಾರೆ.

ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ , ವಸಂತ ಸಂಕಲನ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!