ಬಿಗ್ ಬಾಸ್

ಸುದೀಪ್ ಬಿಗ್ ಬಾಸ್ ತೊರೆಯಲು ಕಾರಣ ರಿವೀಲ್

ಸುದೀಪ್ ಏಕಾಏಕಿ ಬಿಗ್ ಬಾಸ್ ತೊರೆಯಲು ಕಾರಣವೇನು ಎಂಬ ಬಗ್ಗೆ ಮಾಜಿ ಬಿಗ್ ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ.

ರೂಪೇಶ್ ರಾಜಣ್ಣ ‘ಬಿಗ್ ಬಾಸ್’ ಆಯೋಜಕರ ವಿರುದ್ಧ ಹರಿಹಾಯ್ದಿದ್ದರು. ಸುದೀಪ್ ಅವರಿಗೆ ಅವಮಾನ ಆಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಅದಕ್ಕೆ ನಿಜವಾದ ಕಾರಣಗಳು ಏನು ಎಂಬುದು ರಿವೀಲ್ ಆಗಿರಲಿಲ್ಲ. ಈಗ ಈ ವಿಚಾರವನ್ನು ರೂಪೇಶ್ ರಾಜಣ್ಣ ಅವರು ವಿವರಿಸಿ ಸುದೀಪ್ ಬಿಗ್ ಬಾಸ್ ತೊರೆಯಲು ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಈ ಮೊದಲು ‘ಬಿಗ್ ಬಾಸ್​’ನಲ್ಲಿ ಯಾರಾದರೂ ಇಂಗ್ಲಿಷ್ ಮಾತನಾಡಿದರೆ ಅದನ್ನು ಬಿಗ್ ಬಾಸ್ ಸಹಿಸುತ್ತಿರಲಿಲ್ಲ. ಆಗ ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡನ್ನು ಹಾಕುತ್ತಿದ್ದರು. ಈಗ ಈ ಪದ್ಧತಿ ಅಳಿದು ಹೋಗಿದೆ. ಇದಕ್ಕೆ ಬಿಗ್ ಬಾಸ್ ಆಯೋಜಕರೇ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನು ಸುದೀಪ್ ಖಂಡಿಸಿದ್ದಾರೆ. ‘ಹೆಚ್ಚು ಇಂಗ್ಲಿಷ್ ಬಳಕೆ ಮಾಡಿದಾಗ ಅದನ್ನು ಪ್ರಶ್ನೆ ಮಾಡಿ’ ಎಂದು ಸುದೀಪ್ ಕೋರಿದ್ದರು. ಆದರೆ ಇದಕ್ಕೆ ಆಯೋಜಕರು ಒಪ್ಪಿಲ್ಲ.

ಈ ಮೊದಲು ಸ್ವರ್ಗ ಹಾಗೂ ನರಕದ ಕಾನ್ಸೆಪ್ಟ್ ಇತ್ತು. ಸ್ವರ್ಗದ ಮಂದಿ ಹಾಯಾಗಿ ಕುಳಿತಿದ್ದರೆ ನರಕದವರು ನಿಂತೇ ಇದ್ದರು. ಅವರಿಗೆ ಕೂರೂಕೆ ಅವಕಾಶ ಕೊಡಿ ಎಂದು ಸುದೀಪ್ ಕೋರಿದ್ದರು. ಇದಕ್ಕೆ ಆಯೋಜಕರು ಸೊಪ್ಪು ಹಾಕಿಲ್ಲ ಎನ್ನಲಾಗಿದೆ. ಇದು ಸುದೀಪ್ ಕೋಪಕ್ಕೆ ಕಾರಣ ಆಗಿದೆ. ಅಲ್ಲದೆ ನರಕವಾಸಿಗಳಿಗೆ ಟಾಯ್ಲೆಟ್ ಬಳಕೆಗೆ ಯಾವುದೇ ಷರತ್ತುಗಳನ್ನು ಹಾಕದಂತೆಯೂ ಕೋರಿದ್ದರು.

ಎ23 ರಮ್ಮಿ ಆಪ್​ ‘ಬಿಗ್ ಬಾಸ್​’ನ ಸ್ಪಾನ್ಸರ್​ಗಳಲ್ಲಿ ಒಂದಾಗಿದೆ. ಈ ಹೆಸರನ್ನು ತೆಗೆದುಕೊಳ್ಳೋಕೆ ಇರಿಸು ಮುರುಸಾಗುತ್ತಿದೆ ಎಂದು ಸುದೀಪ್ ಹೇಳಿದ್ದರು. ಇದನ್ನು ಅವಾಯ್ಡ್ ಮಾಡಿ ಎಂದು ಕೋರಿದ್ದರು. ಆದರೆ ಇದಕ್ಕೆ ಆಯೋಜಕರು ಒಪ್ಪಿಲ್ಲ. ಇದೆಲ್ಲಾ ಕಾರಣದಿಂದ ಸುದೀಪ್ ಬಿಗ್ ಬಾಸ್ ನಿರೂಪಣೆಯಿಂದ ಹೊರ ಬರಲು ನಿರ್ಧರಿಸಿದ್ದಾರೆ ಎಂದು ರೂಪೇಶ್ ರಾಜಣ್ಣ ಹೇಳಿದ್ದಾರೆ.

ಯಾವಾಗ ಸುದೀಪ್ ಬಿಗ್ ಬಾಸ್ ತೊರೆಯಲು ನಿರ್ಧರಿಸಿದರೋ ಆಗ ಆಯೋಜಕರು ಬದಲಾವಣೆಗಳನ್ನು ಮಾಡಲು ಒಪ್ಪಿದ್ದಾರೆ ಎನ್ನಲಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!