K Vasu: ಖ್ಯಾತ ನಿರ್ದೇಶಕ ಕೆ.ವಾಸು ನಿಧನ

ನವರಸ ನಾಯಕ ಜಗ್ಗೇಶ್ ನಟನೆಯ ಸರ್ವರ್ ಸೋಮಣ್ಣ ಚಿತ್ರವನ್ನು ನಿರ್ದೇಶನ ಮಾಡಿದ್ದ ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಕೆ.ವಾಸು ನಿಧನರಾಗಿದ್ದಾರೆ.

ಅವರು ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಕೆ.ವಾಸು ಅವರ ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ಕೆಲ ತಿಂಗಳಿಂದ ಅವರಿಗೆ ಡಯಾಲಿಸಸ್ ಕೂಡ ಮಾಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಂಜೆ ಹೈದರಾಬಾದ್ ನ ಫಿಲ್ಮ್ ನಗರದಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ತೆಲುಗು ಸ್ಟಾರ್ ಚಿರಂಜೀವಿ ಅವರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದ ಕೀರ್ತಿಯನ್ನು ವಾಸು ಹೊಂದಿದ್ದಾರೆ.

ಕೆ.ವಾಸು ಅವರ ನಿಧನಕ್ಕೆ ಚಿರಂಜೀವಿ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚಿರಂಜೀವಿ ಟ್ವೀಟ್ ಮಾಡಿದ್ದಾರೆ. ಕೆ.ವಾಸು ನಿರ್ದೇಶನದ ಪ್ರಣಾಮ್ ಖರೀದು ಚಿತ್ರದ ಮೂಲಕ ತಾವು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದನ್ನೂ ಚಿರಂಜೀವಿ ನೆನೆದು ದುಃಖ ವ್ಯಕ್ತಪಡಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!