ರಾಕೇಶ್ ಕುಟುಂಬಸ್ಥರ ಭೇಟಿಯಾದ ರಿಷಬ್

ಹೃದಯಾಘಾತಕ್ಕೆ ತುತ್ತಾಗಿ ಇತ್ತೀಚೆಗೆ ಸಾವನ್ನಪ್ಪಿದ ಹಾಸ್ಯನಟ ರಾಕೇಶ್ ಪೂಜಾರಿ ಮನೆಗೆ ನಟ-ನಿರ್ದೇಶಕ ರಿಷಬ್ ಶೆಟ್ಟಿ  ಭೇಟಿ ಮಾಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ರಾಕೇಶ್ ಪೂಜಾರಿ ಸಾವನ್ನಪ್ಪಿದ್ದ 21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ   ಸಾಥ್ ನೀಡಿದರು. ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ  ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.  ಅಲ್ಲಿ ರಾಕೇಶ್ ತಂಗಿ ಮತ್ತು ತಾಯಿ ವಾಸವಾಗಿದ್ದಾರೆ.

ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಕುಸಿದು ಸಾವನ್ನಪ್ಪಿದ್ದರು. ರಾಕೇಶ್ ನಿಧನರಾದಾಗ ಕಾಂತಾರ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ  ಅವರು ಅಂತಿಮ ದರ್ಶನ ಪಡೆಯಲು ಬರಲಿಲ್ಲ ಎಂಬುದು ಸಾಕಷ್ಟು ಚರ್ಚೆ ಆಗಿತ್ತು.

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ರಾಕೇಶ್ ಪೂಜಾರಿ ನಟಿಸಿದ್ದರು.  ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರಿಗೆ ಒಂದು ವಿಶೇಷ ಪಾತ್ರ ನೀಡಲಾಗಿತ್ತು. ಶೂಟಿಂಗ್​ನಲ್ಲಿ ಅವರು ಪಾಲ್ಗೊಂಡಿದ್ದರು. ಆದರೆ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ನಿಧನರಾದರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!