ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬರುತ್ತಿದೆ ‘ಕಾಂತಾರ ‘

ಹೊಂಬಾಳೆ ಫಿಲಂಸ್ ಹೊಸ ಚಿತ್ರ ಘೋಷಣೆ ಮಾಡಿದ್ದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಚಿತ್ರದಲ್ಲಿ ನಾಯಕ ನಟನಾಗಿ ನಟಿಸುವ ಜೊತೆಗೆ ಚಿತ್ರ ನಿರ್ದೇಶನ ಮಾಡಲಿದ್ದಾರೆ.

ಚಿತ್ರಕ್ಕೆ ‘ಕಾಂತಾರ’ ಎಂದು ಟೈಟಲ್ ಇಡಲಾಗಿದ್ದು ‘ಒಂದು ದಂತಕಥೆ’ ಎನ್ನುವ ಸಬ್ ಟೈಟಲ್ ನೀಡಲಾಗಿದೆ. ಪೋಸ್ಟರ್ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳದ ಚಿತ್ರಣವನ್ನು ಹೊಂದಿದೆ.
ಈ ಚಿತ್ರದ ಮೂಲಕ ರಿಷಬ್ ಶೆಟ್ಟಿ 3 ವರ್ಷದ ಬಳಿಕ ನಿರ್ದೇಶನದ ಕಡೆ ಮುಖ ಮಾಡಿದ್ದಾರೆ. ಚಿತ್ರದ ಪೋಸ್ಟರ್ ಶೇರ್ ಮಾಡಿರುವ ರಿಷಬ್ ಶೆಟ್ಟಿ, “ಬಹಳ ಸಮಯದ ನಂತರ ಹೊಸ ಕಿಚ್ಚಿನೊಂದಿಗೆ ಮತ್ತೆ ನಿರ್ದೇಶಕನಾಗಿ ಕಥೆ ಹೇಳಲು ಬರುತ್ತಿದ್ದೇನೆ. ಈ ಕಿಚ್ಚು ನಮ್ಮ ಸುತ್ತಲೂ ಸದ್ಯ ಕವಿದಿರುವ ಕರಾಳತೆಯನ್ನು ದಹಿಸುತ್ತದೆ ಎಂಬ ನಂಬಿಕೆ ಇದೆ” ಎಂದು ಹೇಳಿದ್ದಾರೆ.
ಕಾಂತಾರ’ ಸಿನಿಮಾ ಆಗಸ್ಟ್ 27ರಿಂದ ಚಿತ್ರೀಕರಣ ಪ್ರಾರಂಭ ಆಗಲಿದೆ ಎಂದು ಹೇಳಲಾಗಿದೆ.

ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆ ಆಗಿರುವ ಕಂಬಳದ ಕುರಿತು ಇದುವರೆಗೆ ಯಾರೂ ಸಿನೆಮಾ ತಯಾರಿಸಿಲ್ಲ. ಕಂಬಳದ ಕುರಿತು ಈಗ ಚಿತ್ರ ಸೆಟ್ ಏರುತ್ತಿರುವುದು ಚಿತ್ರಪ್ರೇಮಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ರಿಷಬ್ ಬೆಲ್ ಬಾಟಮ್-2, ಆಂಟಗೊನಿ ಶೆಟ್ಟಿ, ಹರಿಕಥೆ ಅಲ್ಲ ಗಿರಿಕಥೆ, ಗರುಡ ಗಮನ ವೃಷಬ ವಾಹನ ಹೀಗೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದಲ್ಲದೇ ‘ರುದ್ರಪ್ರಯಾಗ’ ಸಿನಿಮಾ ನಿರ್ದೇಶನವನ್ನು ಮಾಡಲಿದ್ದಾರೆ.
____________

Be the first to comment

Leave a Reply

Your email address will not be published. Required fields are marked *

Translate »
error: Content is protected !!