ಜುಲೈ 26ಕ್ಕೆ ‘ರೂಪಾಂತರ’ ತೆರೆಗೆ

ರಾಜ್ ಬಿ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ನಟರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ರೂಪಾಂತರ’  ಸಿನಿಮಾ ಜುಲೈ 26ಕ್ಕೆ ತೆರೆಗೆ ಬರಲಿದೆ.

‘ರೂಪಾಂತರ’ ಸಿನಿಮಾದ ಟ್ರೈಲರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಟ್ರೈಲರ್ ತನ್ನ ಭಿನ್ನತೆಯಿಂದ ಗಮನ ಸೆಳೆಯುತ್ತಿದೆ. ಟ್ರೈಲರ್​ನಲ್ಲಿ ಹಿಂಸಾತ್ಮಕ ಪ್ರವೃತ್ತಿಯವೊಬ್ಬನಿದ್ದಾನೆ.  ಹಳ್ಳಿಯ ಮುದಿ ಪತಿ-ಪತ್ನಿ ಮತ್ತು ಅವರ ನಗರದ ಕನಸುಗಳಿವೆ. ಒಬ್ಬಂಟಿ ಯುವಕನಿದ್ದಾನೆ.ಭಿಕ್ಷೆ ಬೇಡುವ ಯುವತಿ ಇದ್ದಾಳೆ,. ಅವಳೊಟ್ಟಿಗೆ ಪುಟ್ಟ ಮಗುವೊಂದಿದೆ.ಇದೆಲ್ಲದರ ಜೊತೆಗೆ ಕೈಯಲ್ಲಿ ಅತ್ಯಾಧುನಿಕ ಆಯುಧಗಳನ್ನು ಹಿಡಿದ ಜನರಿದ್ದಾರೆ. ಒಟ್ಟಾರೆಯಾಗಿ ಟ್ರೈಲರ್  ಕುತೂಹಲ ಮೂಡಿಸುತ್ತಿದೆ.

ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ ಬಿ ಶೆಟ್ಟಿ, ‘ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಈಗ ಮಾರುಕಟ್ಟೆಯಲ್ಲಿರುವುದಕ್ಕಿಂತಲೂ ಭಿನ್ನವಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. ಆಗ ಜನರು ಸಿನಿಮಾಗಳನ್ನು ನೋಡುತ್ತಾರೆ ಎಂಬ ಉದ್ದೇಶದಿಂದ ಸಿನಿಮಾ ಮಾಡಲು ಆರಂಭಿಸಿದ್ದೆವು. ಅದೇ ಉದ್ದೇಶದಿಂದ ಈ ಸಿನಿಮಾವನ್ನು ಮಾಡಿದ್ದೇವೆ. ಇದು ನನಗೆ ಬಹಳ ಇಷ್ಟವಾದ ಸಿನಿಮಾ.  ಈ ಚಿತ್ರದಲ್ಲಿ ನಾನು ನಟ ಮಾತ್ರ. ಸಂಭಾಷಣೆಗೆ ಸ್ವಲ್ಪ ಸಹಾಯ ಮಾಡಿದ್ದೇನೆ. ಮಿಕ್ಕಿದೆಲ್ಲಾ ಈ ತಂಡದ ಕನಸು. ನನ್ನ ಬಿಟ್ಟು ಬೇರೆ ಮುಖ್ಯಪಾತ್ರಗಳು ಈ ಸಿನಿಮಾದಲ್ಲಿವೆ.  “ಒಂದು ಮೊಟ್ಟೆಯ ಕಥೆ ” ಚಿತ್ರ ಮಾಡಿದ ತಂಡದೊಂದಿಗೆ ಈ ಚಿತ್ರ ಮಾಡಿರುವುದು ಖುಷಿಯಾಗಿದೆ’ ಎಂದರು.

ನಿರ್ಮಾಪಕ ಸುಹಾನ್ ಪ್ರಸಾದ್ ಮಾತನಾಡಿ, ‘ಮಂಗಳೂರಿನವರು ಮಂಗಳೂರಿಗರಿಗೆ ಸಿನಿಮಾ ಮಾಡುತ್ತಾರೆ ಎಂಬ ಮಾತಿದೆ‌. ಆದರೆ ಈ ಚಿತ್ರವನ್ನು ನಾವು ಬೆಂಗಳೂರಿನಲ್ಲಿ ಮಾಡಿದ್ದೇವೆ‌. ರಾಜ್ ಬಿ ಶೆಟ್ಟಿ ಅವರನ್ನು ಹೊರತು ಪಡಿಸಿ ಮಿಕ್ಕೆಲ್ಲ ನಟರು ಬೇರೆ ಬೇರೆ ಪ್ರಾಂತ್ಯದವರು. ಜುಲೈ 26 ರಂದು ಚಿತ್ರ ಬಿಡುಗಡೆಯಾಗಲಿದೆ‌” ಎಂದರು.

ನಿರ್ದೇಶಕ ಮಿಥಿಲೇಶ್ ಎಡವಲತ್, ”ಐದು ಪ್ರಮುಖಪಾತ್ರಗಳ ಸುತ್ತ ಚಿತ್ರದ ಕಥೆ ಸುತ್ತುತ್ತದೆ. ರಾಜ್ ಬಿ ಶೆಟ್ಟಿ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಬಂದಿದೆ” ಎಂದರು.

ಚಿತ್ರದಲ್ಲಿ ನಟಿಸಿರುವ ಅಂಜನ್ ಭಾರದ್ವಾಜ್ ಹಾಗೂ ಲೇಖಾ ನಾಯ್ಡು  ತಮ್ಮ ಪಾತ್ರದ ಕುರಿತು ಮಾತನಾಡಿದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!