Samudram: ಸಮುದ್ರಂ ಚಿತ್ರತಂಡದಲ್ಲಿ ಗೊಂದಲ, ಎಫ್ ಐ ಆರ್ ದಾಖಲು

‘ಸಮುದ್ರಂ’ ಚಿತ್ರತಂಡದ ಛಾಯಾಗ್ರಾಹಕ ರಿಷಿಕೇಶ್ ವಿರುದ್ಧ ನಿರ್ಮಾಪಕಿ ರಾಜಲಕ್ಷ್ಮಿ ಅವರು ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು ದೊಡ್ಡ ಸುದ್ದಿಯಾಗಿದೆ.

ರಾಜಲಕ್ಷ್ಮೀ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸಮುದ್ರಂ ಸಿನಿಮಾ ನಿರ್ಮಾಣ ಮಾಡಿದ್ದು, ಈ ಚಿತ್ರಕ್ಕೆ ಛಾಯಾಗ್ರಹಣ, ಸಂಕಲನ, ಸಂಗೀತ, ರೆಕಾರ್ಡಿಂಗ್, ಡಬ್ಬಿಂಗ್, ರೀ ರೆಕಾರ್ಡಿಂಗ್, ಡಿಐ ಗಾಗಿ ರಿಷಿಕೇಶ್ ಅವರಿಗೆ 10 ಲಕ್ಷದ ಪ್ಯಾಕೆಜ್ ನೀಡಲಾಗಿತ್ತು. 10 ಲಕ್ಷ ರೂಪಾಯಿ ಪಡೆದು 15 ದಿನ ಚಿತ್ರೀಕರಣ ಬಳಿಕ ರಿಷಿಕೇಶ್ ನಾಪತ್ತೆಯಾಗಿದ್ದಾರೆ. ಬಳಿಕ ಸಿಕ್ಕಾಗ ಚಿತ್ರವನ್ನು ಉತ್ತಮವಾಗಿ ಮಾಡೋಣ ಎಂದು 19 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ ಎಂದು ರಾಜಲಕ್ಷ್ಮಿ ದೂರು ನೀಡಿದ್ದಾರೆ.

ಚಿತ್ರದ ಉಳಿದ ಚಿತ್ರೀಕರಣ ಪೂರ್ಣ ಮಾಡಲು ಕೇಳಿದಾಗ ರಿಷಿಕೇಶ್ ಕ್ಯಾತೆ ತೆಗೆದಿದ್ದಾರೆ. ಅನಿತಾ ಭಟ್ ಅವರನ್ನು ನಿರ್ಮಾಪಕರನ್ನಾಗಿ‌ ಸೇರಿಸಿಕೊಳ್ಳುವಂತೆ ಬೇಡಿಕೆ ಇಟ್ಟಿದ್ದಾರೆ. ಒಪ್ಪದಿದ್ದಕ್ಕೆ ಸಿನಿಮಾಗೆ ಸಂಬಂಧಿಸಿದ ನಾಲ್ಕು ಹಾರ್ಡ್ ಡಿಸ್ಕ್ ಕೊಡದೆ ಬೆದರಿಕೆ ಹಾಕಿದ್ದಾರೆಂದು ದೂರು ದಾಖಲು ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅನಿತಾ ಭಟ್, ನಾನು ಕೂಡ ಚಿತ್ರ ನಿರ್ಮಾಣಕ್ಕೆ ಹಣ ಹಾಕಿದ್ದೇನೆ. ಅವರು ಮಾತ್ರ ನಿರ್ಮಾಪಕಿ, ನನಗೆ ಸಂಬಂಧ ಇಲ್ಲ ಎಂದು ಹೇಳಿರುವುದು ಸರಿಯಲ್ಲ. ಕ್ಯಾಮೆರಾ ಮನ್ ಗೆ ಅಷ್ಟು ದೊಡ್ಡ ಮೊತ್ತ ಯಾಕೆ ಕೊಟ್ಟಿದ್ದಾರೆ ಗೊತ್ತಿಲ್ಲ. ಅವರು ಹಾರ್ಡ್ ಡಿಸ್ಕ್ ತೆಗೆದುಕೊಂಡು ಹೋಗಿಲ್ಲ. ನಾನು ಚಿತ್ರ ನಿರ್ಮಾಣದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದೇನೆ. ಇದೆಲ್ಲ ಹಣಕ್ಕಾಗಿ ಮಾಡಿರುವುದು ಎಂದಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!