ತೆರೆಗೆ ಬರಲು ‘ಸಮುದ್ರಂ’ ಸಿದ್ಧ

ಅನಿತಾ ಭಟ್ ಕ್ರಿಯೇಷನ್ಸ್ ಹಾಗೂ ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ನಿರ್ಮಾಣದ ಹೊಸ ಚಿತ್ರದ ಟೈಟಲ್ ಅನಾವರಣಗೊಂಡಿದೆ. ರೋರಿಂಗ್ ಸ್ಟಾರ್ ಶ್ರೀ ಮುರುಳಿ ಗಣೇಶ ಚತುರ್ಥಿಯ ದಿನದಂದು ‘ಸಮುದ್ರಂ’ ಟೈಟಲ್ ಅನಾವರಣ ಮಾಡಿದರು.

ಈ ಚಿತ್ರದ ಮೂಲಕ ನಟಿ ಅನಿತಾ ಭಟ್ ಅವರು ನಿರ್ಮಾಪಕರಾಗಿ ಬಡ್ತಿ ಹೊಂದಿದ್ದಾರೆ. ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ನಿರ್ಮಾಣ ಮಾಡಿರುವ ಚಿತ್ರಕ್ಕೆ ಅನಿತಾ ಭಟ್ ಕ್ರಿಯೇಷನ್ಸ್, ಡಾಟ್ ಟಾಕೀಸ್ ಸಹಯೋಗ ಇರಲಿದೆ.

ಇದೊಂದು ಕಡಲ ಕಿನಾರೆಯಲ್ಲಿನ ಭಾವನಾತ್ಮಕ ಕಥಾ ಹಂದರವನ್ನು ಹೊಂದಿರುವ ಚಿತ್ರವಾಗಿದೆ. ಅನಿತಾ ಭಟ್ ಮತ್ತು ಶಿವಧ್ವಜ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಜ್ ಕಿಶೋರ್ – ಸ್ವಾತಿ ಬಂಗೇರ ಜೋಡಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

ರಾಘವ ಮಹರ್ಷಿ ಚಿತ್ರದ ನಿರ್ದೇಶನ ಮಾಡಲಿದ್ದು, ಆಕಾಶ್ ಪರ್ವ ಸಂಗೀತ ಸಂಯೋಜಿಸಿದ್ದಾರೆ. ರಿಷಿಕೇಶ್ ಛಾಯಾಗ್ರಹಣದ ಜೊತೆಗೆ ಸಂಕಲನ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ಅನಿತಾ ಭಟ್ ಈ ಚಿತ್ರದಲ್ಲಿ ಗೃಹಿಣಿಯಾಗಿ ನಟಿಸಿದ್ದು ರೆಬೆಲ್ ಆಗಿ ಸಮಾಜದೆದೆರು ನಿಲ್ಲುವ ದಿಟ್ಟ ಹೆಣ್ಣಾಗಿ ನಟಿಸಿದ್ದಾರೆ. ಚಿತ್ರವನ್ನು ಉಡುಪಿ, ಮಲ್ಪೆ, ಬ್ರಹ್ಮಾವರ, ಸಕಲೇಶಪುರ ಮತ್ತಿತರ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರ ಶೀಘ್ರದಲ್ಲಿಯೇ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ಹೇಳಿದೆ.

https://t.co/2tHI7KtChD

 


___

Be the first to comment

Leave a Reply

Your email address will not be published. Required fields are marked *

Translate »
error: Content is protected !!