ಕ್ಲಾಂತ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದ ಸಂಗೀತಾ ಭಟ್

ಕನ್ನಡ ಚಿತ್ರರಂಗದಿಂದ ವಿರಾಮ ತೆಗೆದುಕೊಂಡಿದ್ದ ನಟಿ ಸಂಗೀತಾ ಭಟ್ ಕ್ಲಾಂತ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. 2018ರಲ್ಲಿ ಚಿತ್ರರಂಗದಿಂದ ವಿರಾಮ ತೆಗೆದುಕೊಂಡಿದ್ದ ಸಂಗೀತ ಭಟ್ ಈಗ ವೈಭವ್ ಪ್ರಶಾಂತ್ ನಿರ್ದೇಶನದ ಕ್ಲಾಂತ ಚಿತ್ರದ ಮೂಲಕ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ.

ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಎಂದು ಹೇಳಲಾಗಿದೆ. ದಟ್ಟವಾದ ಕಾಡಿನಲ್ಲಿ ತಿರುಗಾಡುವ ವೇಳೆಗೆ ಯುವ ಪ್ರೇಮಿಗಳು ಗ್ಯಾಂಗ್ ದಾಳಿಗೆ ಒಳಗಾಗುವ ಸವಾಲುಗಳು ಇಲ್ಲಿವೆ.

ಚಿತ್ರದಲ್ಲಿ ವಿಘ್ನೇಶ್ ಅವರು ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ತನ್ನ ಪಾತ್ರ ಭಿನ್ನವಾಗಿದೆ ಎಂದು ಸಂಗೀತಾ ಭಟ್ ಹೇಳಿದ್ದಾರೆ.

ಈ ಚಿತ್ರದಲ್ಲಿ ಆಕ್ಷನ್ ಸ್ಟಂಟ್ ಗಳನ್ನು ಮಾಡಿದ್ದೇನೆ ಎಂದು ಸಂಗೀತಾ ಭಟ್ ಹೇಳಿದ್ದಾರೆ.

ಸಂಗೀತ ಭಟ್ ಅವರು ಪ್ರೀತಿ ಗೀತಿ ಇತ್ಯಾದಿ, ಎರಡನೇ ಸಲ, ದಯವಿಟ್ಟು ಗಮನಿಸಿ ಚಿತ್ರಗಳ ಮೂಲಕ ಹೆಸರು ಪಡೆದಿದ್ದಾರೆ. ಕೆಲ ವರ್ಷಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಮರಳಿರುವ ಅವರಿಗೆ ಕ್ಲಾಂತ ಚಿತ್ರ ಯಾವ ರೀತಿಯ ಯಶಸ್ಸು ನೀಡುತ್ತದೆ ಎಂದು ಕಾದು ನೋಡಬೇಕಿದೆ.

__

Be the first to comment

Leave a Reply

Your email address will not be published. Required fields are marked *

Translate »
error: Content is protected !!