ಸೆ.17 ರಂದು ಚಡ್ಡಿದೋಸ್ತ್ ರಿಲೀಸ್

ಆಸ್ಕರ್ ಕೃಷ್ಣ ನಿರ್ದೇಶನದ ಜೊತೆಗೆ ನಾಯಕ ನಟನಾಗಿ ಅಭಿನಯಿಸಿರುವ ‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಚಿತ್ರ ಸೆ.17 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಇಬ್ಬರು ಸ್ನೇಹಿತರ ಮಧ್ಯೆ ಬರುವ ಚೆಲುವೆಯಿಂದ, ಮೂವರ ಸುತ್ತ ಸುತ್ತಿಕೊಳ್ಳುವ ಸಾಮಾಜಿಕ ವ್ಯವಸ್ಥೆಯ ರೂಪ, ಇವುಗಳ ನಡುವೆ ಸಿಲುಕಿ ಹಾಕಿಕೊಂಡ ಸ್ನೇಹ, ಪ್ರೀತಿ, ಭಾವನಾತ್ಮಕ ಸಂಬಂಧಗಳ ಕಥಾಹಂದರವನ್ನು ಚಿತ್ರ ಒಳಗೊಂಡಿದೆ.

ಲೋಕೇಂದ್ರ ಸೂರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವ ಜೊತೆಗೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿ ಪಾತ್ರದಲ್ಲಿ ಮಲಯಾಳo ನಟಿ ಗೌರಿ ನಾಯರ್ ನಟಿಸಿದ್ದಾರೆ.

‘ರೆಡ್ ಅಂಡ್ ವೈಟ್’ ಖ್ಯಾತಿಯ ಸೆವೆನ್ ರಾಜ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಗಜರಾಜ್, ಪ್ರತಾಪ್, ಸತೀಶ್ ಗೌಡ, ರಾಜು ನಾಯಕ್, ವರ್ಧನ್ ಬಾಲು, ನವೀನ್ ಮಧುಗಿರಿ, ಮಾಸ್ಟರ್ ರಾಕಿನ್, ಮಹಾಲಕ್ಷ್ಮಿ, ಡಾ. ಪದ್ಮಾಕ್ಷಿ, ಭಾನು, ಆಸಿಯಾ ಷರೀಫ್, ಮೈಸೂರು ಶೋಭ ಮತ್ತಿತರರು ನಟಿಸಿದ್ದಾರೆ. ಹರ್ಷಿತ ಕಲ್ಲಿಂಗಲ್ ವಿಶೇಷ ಹಾಡಿಗೆ ನರ್ತಿಸಿದ್ದಾರೆ.
ಚಿತ್ರಕ್ಕೆ ಅನಂತ್ ಆರ್ಯನ್ ಸಂಗೀತ, ಗಗನ್ ಕುಮಾರ್ ಛಾಯಾಗ್ರಹಣ, ಮರಿಸ್ವಾಮಿ ಸಂಕಲನ, ವೈಲೆಂಟ್ ವೇಲು ಸಾಹಸ, ಅಕುಲ್ ನೃತ್ಯ ಇದೆ. ಶ್ರೀಧರ್ ಸಿಯಾ, ಕೃಷ್ಣಕುಮಾರ್, ಸತೀಶ್ ಕ್ಯಾತಘಟ್ಟ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಕರೊನಾ ಸೋಂಕಿನ ಎರಡನೇ ಅಲೆಯ ನಂತರ ಬಿಡುಗಡೆಯಾಗುತ್ತಿರುವ ಈ ಚಿತ್ರ ಜನರನ್ನು ಚಿತ್ರಮಂದಿರಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಲಿದೆ ಎನ್ನುವ ವಿಶ್ವಾಸವನ್ನು ಚಿತ್ರತಂಡ ಹೊಂದಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!