“ಶಂಭೋ ಶಿವ ಶಂಕರ” ಹಾಡಿಗೆ ನಾಟಿಕೋಳಿ ಹೆಜ್ಜೆ

ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ‘ಶಂಭೋ ಶಿವ ಶಂಕರ’ ಚಿತ್ರದ ಹಾಡಿನ‌ ಚಿತ್ರೀಕರಣ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ನಡೆದಿದೆ.ಗೌಸ್ ಫಿರ್ ಬರೆದಿರುವ ‘ನಾಟಿಕೋಳಿ ನಲ್ಲಿಮೂಳೆ ಸರಕನೇ ಎಳಿತ್ತಾಳೆ’ ಎಂಬ ಹಾಡಿಗೆ ನಾಯಕರಾದ ಅಭಯ್‌ ಪುನೀತ್, ರೋಹಿತ್ ಹಾಗೂ ರಕ್ಷಕ್ ರಾಜಸ್ಥಾನ ಬೆಡಗಿ ಕಿರಣ್ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ಕಲೈ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ.

ಇದು ಚಿತ್ರದಲ್ಲಿ ನಾಯಕರನ್ನು ಪರಿಚಯಿಸುವ ಗೀತಯೂ ಹೌದು. ಇನ್ನೆರಡು ಸಾಹಸ ಸನ್ನಿವೇಶಗಳ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ.ಶಂಕರ್ ಕೋನಮಾನಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಯನ್ನು ನಿರ್ದೇಶಕರೆ ಬರೆದಿದ್ದಾರೆ. ಗೌಸ್ ಫೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೆ ಸಂಗೀತ ನೀಡುತ್ತಿದ್ದಾರೆ‌.

ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ. ‘ಶಂಭೋ ಶಿವ ಶಂಕರ’ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ.

ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂಟೆರೊ, ಜೊಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!