‘ಶಿವಾಜಿ ಸುರತ್ಕಲ್’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖ.ಕೆ.ಎನ್ ಹಾಗೂ ಅನೂಪ್ ಗೌಡ ಅವರು ನಿರ್ಮಿಸುತ್ತಿರುವ `ಶಿವಾಜಿ ಸುರತ್ಕಲ್` ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆ ಹಾಗೂ ಜಿಂಕೆಪಾರ್ಕ್ ಬಳಿಯಿರುವ ಬಿಬಿಎಂಪಿ ಆಡಿಟೋರಿಯಂನಲ್ಲಿ ಕೆಲವು ಮಾತಿನ ಭಾಗದ ಸನ್ನಿವೇಶಗಳನ್ನು ನಿರ್ದೇಶಕರು ಚಿತ್ರಿಸಿಕೊಂಡಿದ್ದಾರೆ. ಆರೋಹಿ ನಾರಾಯಣ್, ರೋಹಿತ್ ಭಾನುಪ್ರಕಾಶ್, ಅವಿನಾಶ್, ರಮೇಶ್ ಪಂಡಿತ್ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಆಕಾಶ್ ಶ್ರೀವತ್ಸ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಜೂನ್ 21ರಂದು ಮುಕ್ತಾಯವಾಗಲಿದೆ. ಮಡಿಕೇರಿ ಬಳಿಯ ಶುಂಠಿಕೊಪ್ಪ, ಮೈಸೂರು, ಬೆಂಗಳೂರಿನಲ್ಲಿ ಸುಮಾರು 40ದಿನಗಳ ಚಿತ್ರೀಕರಣ ನಡೆದಿದೆ.

ಗುರುಪ್ರಸಾದ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೂಡಾಸ್ಯಾಂಡಿ ಅವರ ಸಂಗೀತ ನಿರ್ದೇಶನವಿದೆ. ಜಯಂತ ಕಾಯ್ಕಿಣಿ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ. ರಮೇಶ್ ಅರವಿಂದ್, ರಾಧಿಕಾ ನಾರಾಯಣ್(ರಂಗಿತರಂಗ), ಆರೋಹಿ ನಾರಾಯಣ್, ರೋಹಿತ್ ಭಾನುಪ್ರಕಾಶ್, ಅವಿನಾಶ್, ರಮೇಶ್ ಪಂಡಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 1 Comment
  1. Pingback: regression testing

Leave a Reply

Your email address will not be published. Required fields are marked *

Translate »
error: Content is protected !!