ಶೀಘ್ರ ಶಿವಾಜಿ ಸುರತ್ಕಲ್ 2 ಶೂಟಿಂಗ್

ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ನವಂಬರ್ 4ರಿಂದ ಆರಂಭ ಆಗಲಿದೆ.

ಈ ಚಿತ್ರವನ್ನು ಆಕಾಶ್ ಶ್ರೀವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಿವಾಜಿ ಸುರತ್ಕಲ್- ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ ಹೆಸರಿನ ಸಿನಿಮಾವನ್ನು ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ.

ಕೊರೊನಾ ಕಾರಣದಿಂದ ಕಳೆದ 2 ವರ್ಷಗಳಿಂದ ಯಾವುದೇ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿ ಆಗದೆ ಇರುವ ರಮೇಶ್ ಅರವಿಂದ್ ಅವರು, ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲು ಉತ್ಸುಕ ಆಗಿರುವುದಾಗಿ ಹೇಳಿದ್ದಾರೆ.

“ಆಕ್ಷನ್ ಕಟ್ ಎನ್ನುವ ಪದಗಳನ್ನು ನಿರ್ದೇಶಕರ ಬಾಯಿಂದ ಕೇಳುವುದು, ಕ್ಯಾಮೆರಾ ಎದುರು ನಿಲ್ಲುವುದು, ಮೇಕಪ್ ಹಾಕಿಕೊಳ್ಳುವುದು ನನ್ನ ಜೀವನದ ಅವಿಭಾಜ್ಯ ಅಂಗ. ಡೈರೆಕ್ಟರ್ ಆಕ್ಷನ್ ಕಟ್ ಹೇಳಿದಾಗ ಆಗುವ ರೋಮಾಂಚನ ಎಲ್ಲವನ್ನೂ ಮಿಸ್ ಮಾಡಿಕೊಂಡಿದ್ದೆ. ಈಗ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿರುವುದಕ್ಕೆ ಖುಷಿ ಆಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಚಿತ್ರದಲ್ಲಿ ರಾಧಿಕಾ ನಾರಾಯಣ್, ರಘು ರಾಮನಕೊಪ್ಪ, ವಿದ್ಯಾ ಮೂರ್ತಿ ಮತ್ತಿತರರು ನಟಿಸುತ್ತಿದ್ದಾರೆ. ಗುರುಪ್ರಸಾದ್ ಎಂ.ಜಿ ಸಿನಿಮೆಟೊಗ್ರಾಫಿ ಮಾಡಲಿದ್ದಾರೆ.

ರಮೇಶ್ ಅರವಿಂದ್ ಈ ಚಿತ್ರದಲ್ಲಿ ಎರಡು- ಮೂರು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಮೊದಲ ಭಾಗಕ್ಕಿಂತ ಭಿನ್ನವಾಗಿ ಚಿತ್ರವನ್ನು ಕರ್ನಾಟಕದಾದ್ಯಂತ ಚಿತ್ರೀಕರಿಸಲಾಗುತ್ತದೆ ಎಂದು ನಿರ್ದೇಶಕರು ಹೇಳಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!